Breaking News

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಕೇಂದ್ರದಲ್ಲಿ ಎಸ್​ಐಟಿ ಅಧಿಕಾರಿಗಳು ಮಹಜರು ಕಾರ್ಯ ನಡೆಸಿದ್ದಾರೆ. ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ ಪ್ರಯೋಗಾಲಯಕ್ಕೆ ರವಾನಿಸುವುದಾಗಿ ತಿಳಿದುಬಂದಿದೆ. ಆ ಮೂಲಕ ಇಂದು ಬೆಳಗ್ಗೆಯಿಂದ ಸತತ ಮೂರು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿ ವಸ್ತುಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಎಲ್ಲವನ್ನೂ ಪ್ರಯೋಗಾಲಯಕ್ಕೆ ಕಳುಹಿಸಿ ಹೆಚ್ಚಿನ ತನಿಖೆ ನಡೆಸಲು ಸನ್ನದ್ಧರಾಗಿದ್ದಾರೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ