Breaking News

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಕೇಂದ್ರದಲ್ಲಿ ಎಸ್​ಐಟಿ ಅಧಿಕಾರಿಗಳು ಮಹಜರು ಕಾರ್ಯ ನಡೆಸಿದ್ದಾರೆ. ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ ಪ್ರಯೋಗಾಲಯಕ್ಕೆ ರವಾನಿಸುವುದಾಗಿ ತಿಳಿದುಬಂದಿದೆ. ಆ ಮೂಲಕ ಇಂದು ಬೆಳಗ್ಗೆಯಿಂದ ಸತತ ಮೂರು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿ ವಸ್ತುಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಎಲ್ಲವನ್ನೂ ಪ್ರಯೋಗಾಲಯಕ್ಕೆ ಕಳುಹಿಸಿ ಹೆಚ್ಚಿನ ತನಿಖೆ ನಡೆಸಲು ಸನ್ನದ್ಧರಾಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ