Breaking News

ನನ್ನ ರಾಜಕೀಯ ಏಳ್ಗೆಗೆ ಗೋಕಾಕ ಕ್ಷೇತ್ರದ ಜನರ ಸಹಕಾರವೇ ಪ್ರಮುಖ ಕಾರಣ: ಸತೀಶ ಜಾರಕಿಹೊಳಿ

Spread the love

ಗೋಕಾಕ: “ನನ್ನ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕ ಮತಕ್ಷೇತ್ರದಿಂದ. ಗೋಕಾಕ ಜನರೇ ನನ್ನ ರಾಜಕೀಯ ಏಳ್ಗೆಗೆ ಪ್ರಮುಖ ಕಾರಣ” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.

ಗೋಕಾಕ ವಿಧಾನಸಭಾ ಮತಕ್ಷೇತ್ರದ ಮಮದಾಪುರ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ ಅವರು ಮಾತನಾಡಿದರು.

“ಕಳೆದ 30 ವರ್ಷಗಳಿಂದ ನಾನು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೇನೆ. ನಮ್ಮ ರಾಜಕೀಯ ಜೀವನ ಆರಂಭವಾಗಿದ್ದೆ ಗೋಕಾಕನಿಂದ. ಮಮದಾಪುರ ಗ್ರಾಮದ ಮುಖಂಡರು ಹಾಗೂ ಈ ಭಾಗದ ಅನೇಕರು ಸೇರಿ ಅಂದು ಸಂಘಟನೆ ಆರಂಭಿಸಿದ್ದೆವು. ಈಗಲೂ ನಾವು ಒಗ್ಗಟ್ಟಾಗಿದ್ದೇವೆ. ನೀವೆಲ್ಲರೂ ನಮ್ಮ ಗೆಲುವಿಗೆ ಕೈಜೋಡಿಸಲಿದ್ದೀರಿ ಎಂಬ ನಂಬಿಕೆ ಇದೆ” ಎಂದರು.

“ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದೇನೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮತದಾರರು ಒಂದು ಬಾರಿ ಅವಕಾಶ ಮಾಡಿಕೊಡಬೇಕು” ಎಂದು ಅವರು ಮನವಿ ಮಾಡಿದರು.

“ಗೋಕಾಕ ಮತಕ್ಷೇತ್ರದಲ್ಲಿ ಯಾವ ರೀತಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕೆಂಬ ಆಲೋಚನೆಗಳು ನಮ್ಮಲ್ಲಿವೆ. ತಾವು ಅವಕಾಶ ಮಾಡಿಕೊಟ್ಟರೇ ನಮ್ಮ ಕಾರ್ಯವೈಖರಿ ನಿಮಗೆ ಗೊತ್ತಾಗಲಿದೆ” ಎಂದು ತಿಳಿಸಿದರು.

ಮಮದಾಪುರ ಗ್ರಾಮದ ಮುಖಂಡರು, ನೂರಾರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಇದ್ದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ