Breaking News

ನನ್ನ ಕಾರಿನ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ: ರಾಕೇಶ್ ಟಿಕಾಯತ್

Spread the love

ಜೈಪುರ, ಎ. 2: ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್ ಟಿಕಾಯತ್ ಅವರ ವಾಹನ ವ್ಯೆಹದ ಮೇಲೆ ರಾಜಸ್ಥಾನದ ಅಲವರ್ ಜಿಲ್ಲೆಯ ತಾತರ್‌ಪುರ ಗ್ರಾಮದಲ್ಲಿ ಶುಕ್ರವಾರ ದಾಳಿ ನಡೆದಿದೆ. ಈ ದಾಳಿಯಿಂದ ಟಿಕಾಯತ್ ಅವರ ಕಾರಿನ ಕಿಟಕಿಯ ಗಾಜು ಒಡೆದಿದೆ ಎಂದು ತಿಳಿದು ಬಂದಿದೆ. ರಾಕೇಶ್ ಟಿಕಾಯತ್ ಅವರ ವಾಹನ ಅಲವಾರ್‌ನ ಹರಸೋರಾ ಗ್ರಾಮದಿಂದ ಬಾನಸೂರ್‌ಗೆ ಸಂಚರಿಸುತ್ತಿದ್ದ ಸಂದರ್ಭ ಈ ದಾಳಿ ನಡೆದಿದೆ. ಹರಸೋರಾದಲ್ಲಿ ರೈತರ ಸಭೆ ಉದ್ದೇಶಿಸಿ ಮಾತನಾಡಿದ ಬಳಿಕ ರಾಕೇಶ್ ಟಿಕಾಯತ್ ಅವರು ಬಾನಸೂರ್‌ಗೆ ತೆರಳುತ್ತಿದ್ದರು. ಹಾನಿಗೀಡಾದ ಕಾರಿನ ವೀಡಿಯೊವನ್ನು ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿರುವ ರಾಕೇಶ್ ಟಿಕಾಯತ್, ಬಿಜೆಪಿ ಗೂಂಡಾಗಳು ಈ ದಾಳಿ ನಡೆಸಿದ್ದಾರೆ ಎಂದಿದ್ದಾರೆ. ”ರಾಜಸ್ಥಾನದ ಅಲವಾರ ಜಿಲ್ಲೆಯ ತಾತರ್‌ಪುರದ ಬಾನಸೂರ್ ರಸ್ತೆಯಲ್ಲಿ ಬಿಜೆಪಿಯ ಗೂಂಡಾಗಳು ದಾಳಿ ನಡೆಸಿದ್ದಾರೆ. ಇದು ಪ್ರಜಾಪ್ರಭುತ್ವದ ಸಾವು” ಎಂದು ಟಿಕಾಯತ್ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ

Spread the loveದಾವಣಗೆರೆ: ಗೋಮಾಳ‌ ಜಾಗವನ್ನು ಸರ್ಕಾರಿ ಕಟ್ಟಡ ನಿರ್ಮಾಣ ಮಾಡಲು ಮಂಜೂರು ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ದಾವಣಗೆರೆ ಜಿಲ್ಲೆಯ ನ್ಯಾಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ