Breaking News

ರಾಮ ಮಂದಿರ ನಿರ್ಮಾಣದಿಂದ ರಾಮರಾಜ್ಯ ಆಗಲ್ಲ, ರೈತರ ಬಳಿ ಬರಲು ಮೋದಿಗೆ ಸಮಯ ಇಲ್ಲ : ಸತೀಶ್ ಜಾರಕಿಹೊಳಿ ವಾಗ್ಧಾಳಿ

Spread the love

ಬೆಳಗಾವಿ : ಪ್ರತಿಭಟನೆ ನಡೆಸುತ್ತಿರುವ ರೈತರ ಬಳಿ ಇದುವರೆಗೂ ಪ್ರಧಾನಿ ಮೋದಿ ಭೇಟಿ ನೀಡಿಲ್ಲ, ಸೆಲೆಬ್ರಿಟಿಗಳ ಬರ್ಥ್ ಡೇ ಗೆ ವಿಶ್ ಮಾಡಲು ಸಮಯ ಇದೆ, ಆದರೆ ರೈತರ ಬಳಿ ಬರಲು ಪ್ರಧಾನಿ ಮೋದಿಗೆ ಸಮಯ ಇಲ್ಲ ಎಂದು ‘ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಏಪ್ರಿಲ್ 17 ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಯಳ್ಳೂರು ಗ್ರಾಮದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಜೊತೆ ಗ್ಯಾಸ್ ಬೆಲೆ ಏರಿಕೆ ತಡೆಗೆ ಕೇಂದ್ರ ಹಾಗೂ ರಾಜ್ಯದಲ್ಲಿ ಜನಪರ ಸರ್ಕಾರ ಬೇಕು. ಯಾವುದೇ ಅದಾನಿಗಾಗಲಿ, ಅಂಬಾನಿಗಾಗಲಿ ಸರ್ಕಾರ ಇರಬಾರದದು, ದೆಹಲಿ ಸರ್ಕಾರ ಕೇವಲ ಎರಡ್ಮೂರು ಜನರಿಗಾಗಿ ನಡೆಯುತ್ತಿದೆ ಎಂದು ವಾಗ್ಧಾಳಿ ನಡೆಸಿದರು.

ರೈತರ ಬಳಿ ಬರಲು ಪ್ರಧಾನಿ ಮೋದಿಗೆ ಸಮಯ ಇಲ್ಲ, ರಾಮ ಮಂದಿರ ನಿರ್ಮಾಣದಿಂದ ರಾಮರಾಜ್ಯ ಆಗಲ್ಲ ಎಂದು ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಕಣ್ಣಿನ ಚಿಕಿತ್ಸೆಗೆ ಮಾಧುರಿ ಜಾಧವ್ ಫೌಂಡೇಶನ್ ಮೂಲಕ ಚೆಕ್ ಹಸ್ತಾಂತರ

Spread the loveಬೆಳಗಾವಿ: ಪಟಾಕಿ ಸ್ಫೋಟದಲ್ಲಿ ಕಣ್ಣು ಕಳೆದುಕೊಂಡ ಶಹಾಪುರದ ಶಿವ ಲೋಹರ್ ಅವರ ಚಿಕಿತ್ಸೆಗೆ ಸಹಾಯದ ಮಹಾಪೂರ ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ