Breaking News

ಪುಣೆಯಿಂದ ಆಗಮಿಸಿದ್ದ ವ್ಯಕ್ತಿ ಸಾವಿಗೆ ಕೋವಿಡ್ 19 ಕಾರಣವಲ್ಲ: ಕಿಮ್ಸ್ ಸ್ಪಷ್ಟನೆ

Spread the love

ಹುಬ್ಬಳ್ಳಿ: ಮಹಾರಾಷ್ಟ್ರದ ಪುಣೆಯಿಂದ ಬಂದಿದ್ದ ಎಂಜಿನಿಯರ್ ಸಾವಿಗೆ ಕೋವಿಡ್ 19 ವೈರಸ್ ಕಾರಣವಲ್ಲ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸ್ಪಷ್ಟನೆ ನೀಡಿದ್ದಾರೆ.

ಅತಿಯಾದ ಜಾಂಡಿಸ್ ಹಾಗೂ ಶಂಕಿತ ಬ್ಲಡ್ ಕ್ಯಾನ್ಸರ್ ಇತ್ತು. ಹೀಗಾಗಿ ಆತ ನಿನ್ನೆ ಮಧ್ಯಾಹ್ನ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಆತನ ವರದಿ ನೆಗೆಟಿವ್ ಬಂದಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ತಿಳಿಸಿದ್ದಾರೆ.

ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿ ರಾಜು ನಾಯಕ್ ಎಂಬವರು ಜ್ವರ ನೆಗಡಿ ಕೆಮ್ಮು ಹಾಗೂ ನ್ಯೂಮೋನಿಯಾದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮೃತ ವ್ಯಕ್ತಿಯ ರಕ್ತ ಮಾದರಿ ಹಾಗೂ ಗಂಟಲು ದ್ರವ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿತ್ತು.

ವರದಿ ನೆಗೆಟಿವ್ ಬಂದಿದ್ದು, ವ್ಯಕ್ತಿ ಕಾಮಣಿ ರೋಗದಿಂದ ಮೃತ್ತಪಟ್ಟಿದ್ದಾರೆ ವಿನಃ ಅವರ ಸಾವಿಗೆ ಕೋವಿಡ್-19 ಕಾರಣ ಅಲ್ಲ ಎಂದು ಕಿಮ್ಸ್ ವೈದ್ಯರ ಸ್ಪಷ್ಟನೆ ನೀಡಿದ್ದಾರೆ.


Spread the love

About Laxminews 24x7

Check Also

ಡಿಡಿಪಿಐ ಗಳು ಜಿಲ್ಲೆಗಳಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆ ಪ್ರಯಾಣ ಮಾಡಬೇಕು.:C.M

Spread the loveಡಿಸಿಗಳು, ಸಿಇಒಗಳ ಸಭೆ ಮುಂದುವರೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭೆಯ ಆರಂಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ