ಬಳ್ಳಾರಿ : ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಮನ್ವಯತೆಯ ಕೊರತೆ ಎದ್ದು ಕಾಣುತ್ತಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಕ್ರಮ ನಡೆದ್ರೂ ಇಲ್ಲಿ ಹೇಳೋರು, ಕೇಳೋರು ಯಾರು ಇಲ್ಲದಂತೆ ಆಗಿದೆ. ಸಿಎಂ ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ನಾಲಾಯಕ್ ಎಂಬುದಾಗಿ ಮಾಜಿ ಸಂಸದ ವಿಎಸ್ ಉಗ್ರಪ್ಪ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಲ್ಲಿ ಈಗ ಸಮನ್ವಯತೆಯೇ ಇಲ್ಲ. ಭ್ರಷ್ಟಾಚಾರ, ಅಕ್ರಮವೇ ತಾಂಡವವಾಡುತ್ತಿದೆ. ಈ ಸರ್ಕಾರಕ್ಕೆ ಹೇಳೋರು, ಕೇಳೋರು ಯಾರೂ ಇಲ್ಲ. ಸ್ವತಹ ಸಚಿವ ಈಶ್ವರಪ್ಪನವರೇ ಸಿಎಂ ಯಡಿಯೂರಪ್ಪ ವಿರುದ್ಧ ಬಂಡಾಯವೆದ್ದಿದ್ದಾರೆ. ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪ ನಾಲಾಯಕ್ ಎಂದು ಕಿಡಿಕಾರಿದರು.
Laxmi News 24×7