Breaking News

ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

Spread the love

ಬೆಳಗಾವಿ: ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಈ ನಡುವೆ ಮುಷ್ಕರವನ್ನು ರಾಜ್ಯಾದ್ಯಂತ ಇನ್ನಷ್ಟು ತೀವ್ರಗೊಳಿಸಲು ಸಿದ್ಧತೆ ನಡೆಸುವ ಸಲುವಾಗಿ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಆಗಮಿಸಿದ್ದರು.

ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಸಾರಿಗೆ ನೌಕರರು ಹಾಗೂ ರೈತ ಮುಖಂಡರ ಜೊತೆ ಸಭೆ ನಡೆಸುತ್ತಿದ್ದರು. ಸಭೆ ವೇಳೆಯೇ ಪೊಲೀಸರು ಕೋಡಿಹಳ್ಳಿಯವರನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಮನೆಗಳ ಕರ ಸುಲಾತಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕಾಗವಾಡ ತಾಲೂಕ ಪ್ರಥಮ ಸ್ಥಾನ.

Spread the loveಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 15 ತಾಲೂಕಿನ ತಾಲೂಕಾ ಪಂಚಾಯಿತಿಗಳ ಪೈಕಿ ಕಾಗವಾಡ ತಾಲೂಕ ಪಂಚಾಯಿತಿ ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ