Breaking News
Home / ರಾಜ್ಯ / ಕೋವಿಡ್ ಹೆಚ್ಚಳ ಹಿನ್ನೆಲೆ : ಸರ್ವಪಕ್ಷ ಸಭೆ ಕರೆದ ಸಿಎಂ ಯಡಿಯೂರಪ್ಪ

ಕೋವಿಡ್ ಹೆಚ್ಚಳ ಹಿನ್ನೆಲೆ : ಸರ್ವಪಕ್ಷ ಸಭೆ ಕರೆದ ಸಿಎಂ ಯಡಿಯೂರಪ್ಪ

Spread the love

ಬೀದರ್ : ದಿನೇ ದಿನೇ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಸರ್ವ ಪಕ್ಷ ಸಭೆ ಕರೆದಿದ್ದಾರೆ. ಏಪ್ರಿಲ್ 18, 19ರಂದು ಎಲ್ಲಾ ಪಕ್ಷದ ಹಿರಿಯರ ಜೊತೆ ಕೋವಿಡ್ ನಿಯಂತ್ರಣದ ಬಗ್ಗೆ ಚರ್ಚೆ ನಡೆಸುವುದಾಗಿ ಸೋಮವಾರ ಸಿಎಂ ಯಡಿಯೂರಪ್ಪ ತಿಳಿಸಿದ್ರು.

ಬಸವ ಕಲ್ಯಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಸರ್ವ ಪಕ್ಷಗಳ ಹಿರಿಯರ ಜೊತೆ ಸಭೆ ನಡೆಸುವುದಾಗಿ ಸಿಎಂ ತಿಳಿಸಿದ್ದಾರೆ. ಸಭೆಯಲ್ಲಿ ಕಠಿಣ ನಿಯಮಗಳನ್ನು ಕೈಗೊಳ್ಳುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗುತ್ತಾ ಎಂಬುದು ಆತಂಕಕ್ಕೆ ಕಾರಣವಾಗಿದೆ.

ಇನ್ನು ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ, ನೈಟ್ ಕರ್ಫ್ಯೂ ಸದ್ಯ ಕೆಲವು ನಗರಳಲ್ಲಿ ಮಾತ್ರ ಇದೆ. ಕೋವಿಡ್ ಹೀಗೆ ಮುಂದುವರೆದರೆ ರಾಜ್ಯದ ಹಲವು ಭಾಗಗಳಿಗೆ ನೈಟ್ ಕರ್ಫ್ಯೂ ವಿಸ್ತರಿಸುವ ಅನಿವಾರ್ಯತೆ ಇದೆ ಎಂದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ