Breaking News

7 ನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಇಂದು ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ

Spread the love

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದುಉ 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ.

ಸಾರಿಗೆ ನೌಕರರು ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕು ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಈ ಕುರಿತು ಮಾತನಾಡಿರುವ ಕೋಡಿಹಳ್ಳಿ ಚಂದ್ರಶೇಖರ್, ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸದಾಶಿವನಗರದಲ್ಲಿ ಭಿಕ್ಷೆ ಬೇಡುವ ಮೂಲಕ ವಿಭಿನ್ನ ಚಳವಳಿ ನಡೆಸಲಿದ್ದಾರೆ. ಸಾರಿಗೆ ನೌಕರರಿಗೆ ವೇತನ ಕೊಡದಿದ್ರೆ ಅದು ಕಾನೂನು ಬಾಹಿರ, ಈ ಸಂಬಂಧ ಸಾರಿಗೆ ನೌಕರರು ರಾಜ್ಯಾದ್ಯಂತ ಪೊಲೀಸ್ ಠಾಣೆಗಳಲ್ಲಿ ದೂರು ಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ