Breaking News

ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದರೂ ಸರಿ 6ನೇ ವೇತನ ಆಯೋಗ ಜಾರಿ ಅಸಾಧ್ಯ:B.S.Y.

Spread the love

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ಸಿಬ್ಬಂದಿಗಳು ಹಾಗೂ ಸರ್ಕಾರದ ನಡುವಿನ ಶೀತಲ ಸಮರ ತಾರಕಕ್ಕೇರಿದೆ. ಮುಷ್ಕರ ನಿರತ ಸಿಬ್ಬಂದಿಗಳ ವಿರುದ್ಧ ಸಿಎಂ ಯಡಿಯೂರಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರೊಂದಿಗೆ ಮಾತುಕತೆಯ ಪ್ರಶ್ನೆಯೇ ಇಲ್ಲ, ಮುಷ್ಕರ ನಿರತ ಸಿಬ್ಬಂದಿಗಳ ಸಂಬಳ ನೀಡಲೂ ಸಾಧ್ಯವಿಲ್ಲ. ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದರೂ ಸರಿ 6ನೇ ವೇತನ ಆಯೋಗ ಜಾರಿ ಅಸಾಧ್ಯ ಎಂದು ಖಡಕ್ ಆಗಿ ಹೇಳಿದ್ದಾರೆ.

 

ಸಾರಿಗೆ ನೌಕರರು ಯಾರದೋ ಮಾತು ಕೇಳಿ ಹಬ್ಬದ ಸಂದರ್ಭದಲ್ಲೂ ಮುಷ್ಕರ ಮಾಡುತ್ತಿದ್ದಾರೆ. ಸರ್ಕಾರದ ಯಾವುದೇ ಮನವಿಗೂ ಒಪ್ಪುತ್ತಿಲ್ಲ. ನೌಕರರ ಈ ಧೋರಣೆ ಸರಿಯಲ್ಲ. ಮುಷ್ಕರದಿಂದ ಇಲಾಖೆ ಜೊತೆಗೆ ಸಿಬ್ಬಂದಿಗಳಿಗೇ ನಷ್ಟ. ಒಂದು ತಿಂಗಳು ಪ್ರತಿಭಟನೆ ನಡೆಸಿದರೂ ಕೂಡ ಸರ್ಕಾರ ಮಾತ್ರ ಬಗ್ಗುವ ಪ್ರಶ್ನೆ ಇಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ