Breaking News

ಕೊರೊನಾ ಗೈಡ್ ಲೈನ್ ಉಲ್ಲಂಘಿಸಿ ಪರೀಕ್ಷೆ: ರ್ಯಾಂಕ್ ಬಂದವರಿಗೆ ಬಹುಮಾನದ ಆಮಿಷ – ಕರಿಯರ್ ಅಕಾಡೆಮಿ ಮೇಲೆ ಪೊಲೀಸರ ದಾಳಿ

Spread the love

ಧಾರವಾಡ: ಕೊರೊನಾ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಪರೀಕ್ಷೆ ನಡೆಸುತ್ತಿದ್ದ ವಿದ್ಯಾಕಾಶಿ ಕರಿಯರ್ ಅಕಾಡೆಮಿ ಮೇಲೆ ಪೊಲೀಸರು ದಾಳಿ ನಡೆಸಿ ಪರೀಕ್ಷೆ ನಿಲ್ಲಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.

ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದೂ ಅಲ್ಲದೇ ರ್ಯಾಂಕ್ ಬಂದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿ, ಸಂಸ್ಥೆ ಪರೀಕ್ಷೆ ನಡೆಸುತ್ತಿತ್ತು. ಬಹುಮಾನದ ಆಸೆಗಾಗಿ ನೂರಾರು ವಿದ್ಯಾರ್ಥಿಗಳು ಕೊರೊನಾ ಭೀಕರತೆ ನಡುವೆಯೂ ಜೀವದ ಹಂಗುತೊರೆದು ಪರೀಕ್ಷೆ ಬರೆಯಲು ಬಂದಿದ್ದಾರೆ. ಸ್ಪರ್ಧಾತ್ಮಕ ಮಾದರಿ ಪರೀಕ್ಷೆ ಇದಾಗಿದ್ದು, ಪ್ರಥಮ ಬಹುಮಾನವಾಗಿ 75,000 ರೂ. ದ್ವಿತೀಯ ಬಹುಮಾನ 50,000 ರೂ. ಹಾಗೂ ತೃತೀಯ ಬಹುಮಾನ 25,000 ರೂ. ಎಂದು ಅಕಾಡೆಮಿ ಘೋಷಿಸಿತ್ತು.

ಈ ಮೂಲಕ ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುತ್ತಿದ್ದ ಧಾರವಾಡದ ಶ್ರೀನಗರ ವೃತ್ತದ ಬಳಿಯ ವಿದ್ಯಾಕಾಶಿ ಸಂಸ್ಥೆಯ ಮೇಲೆ ಇದೀಗ ಉಪನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಪರೀಕ್ಷೆ ನಿಲ್ಲಿಸಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ