Breaking News

ನಿಷ್ಠಾವಂತ ಸಿಬ್ಬಂದಿಗಳ ರಕ್ಷಣೆಗೆ ಬದ್ಧ: ಕೆಎಸ್‌ಆರ್‌ಟಿಸಿ

Spread the love

ಬೆಂಗಳೂರು, ಏ.19-ಕರ್ತವ್ಯಕ್ಕೆ ಹಾಜರಾಗುವ ಸಿಬ್ಬಂದಿಗಳ ಮೇಲೆ ಹಲ್ಲೆ ಹಾಗೂ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸುವ ದುಷ್ಕರ್ಮಿಗಳು ಕಠಿಣ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗುವ ನಮ್ಮ ನಿಷ್ಠಾವಂತ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದುಎಂದು ಕೆಎಸ್‌ಆರ್‌ಟಿಸಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಬಸ್ಸುಗಳ ಕಾರ್ಯಾಚರಣೆಯಲ್ಲಿನ ಏರಿಕೆಯಿಂದಾಗಿ ಮುಷ್ಕರ ನಿರತರು ವಿಚಲಿತರಾಗಿದ್ದಾರೆ. ನಿಷ್ಠಾವಂತ ಸಿಬ್ಬಂದಿಗಳ ಮೇಲೆ ಹಲ್ಲೇ , ಬಸ್ಸುಗಳಿಗೆ ಕಲ್ಲು ಹೊಡೆಯುವುದನ್ನು ಹೆಚ್ಚು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. ಈ ಸಂಬಂಧ ಈಗಾಗಲೇ ಹಲವು ಮಂದಿಯನ್ನು ಪೊಲೀಸರು ಬಂಧಿಸಿ ಕಠಿಣ ಕ್ರಮ ಜರುಗಿಸುತ್ತಿದ್ದಾರೆ.

ಇಂದು ಬೆಳಗ್ಗೆ ನಿಗಮದ ಮೂರು ಬಸ್ಸುಗಳಿಗೆ ಕನಕಪುರ- ಹಾರೋಹಳ್ಳಿ ಮಾರ್ಗದಲ್ಲಿ ಕಲ್ಲು ಹೊಡೆದಿದ್ದು, ಕರ್ತವ್ಯಕ್ಕೆ ಬರುತ್ತಿದ್ದ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೇ ಮಾಡಿದ್ದಾರೆ. ಎಂದು ತಿಳಿಸಿದೆ.

ಇದುವರೆಗೂ ನಾಲ್ಕು ಸಾರಿಗೆ ಸಂಸ್ಥೆಗಳ 109 ಬಸ್‍ಗಳಿಗೆ ಹಾನಿಯಾಗಿದೆ. 95 ಮಂದಿಯನ್ನು ಬಂಧಿಸಲಾಗಿದೆ. ಒಟ್ಟು 174 ಎಫ್‍ಐಆರ್ ದಾಖಲಿಸಲಾಗಿದ್ದು, ಸಿಬ್ಬಂದಿ ಮೇಲೆ ಹಲ್ಲೆ ಹಾಗೂ ಬಸ್‍ಗಳ ಮೇಲಿನ ಕಲ್ಲು ತೂರಾಟದಂತಹ ಘಟನೆಗಳಲ್ಲಿ 411 ಮಂದಿ ಭಾಗಿಯಾಗಿದ್ದಾರೆ ಎಂದು ಹೇಳಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

Spread the loveಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ