Breaking News
Home / ರಾಜಕೀಯ / ಮಾಸ್ಕ್​​ ಇಲ್ಲ, ಸಾಮಾಜಿಕ ಅಂತರ ಇಲ್ಲ : ಬಳ್ಳಾರಿಯಲ್ಲಿ ‘ಸಚಿವ ಶ್ರೀರಾಮುಲು’ ಚುನಾವಣಾ ಪ್ರಚಾರ

ಮಾಸ್ಕ್​​ ಇಲ್ಲ, ಸಾಮಾಜಿಕ ಅಂತರ ಇಲ್ಲ : ಬಳ್ಳಾರಿಯಲ್ಲಿ ‘ಸಚಿವ ಶ್ರೀರಾಮುಲು’ ಚುನಾವಣಾ ಪ್ರಚಾರ

Spread the love

ಬಳ್ಳಾರಿ : ರಾಜ್ಯದಲ್ಲಿ ಕೊರೋನಾ ಸೋಂಕಿನ 2ನೇ ಅಲೆಯ ಅಬ್ಬರಿಸುತ್ತಿದೆ. ಇಂತಹ ಸಂದರ್ಭದಲ್ಲೇ ಉಪ ಚುನಾವಣೆಯ ಬಳಿಕ, ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದೆ. ಈ ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತವಾಗಿ ನಗರದ 25ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವಂತ ಸಚಿವ ಬಿ ಶ್ರೀರಾಮುಲು, ಕೊರೋನಾ ಸೋಂಕಿನ ಮಾರ್ಗಸೂಚಿ ಕ್ರಮಗಳನ್ನೇ ಗಾಳಿಗೆ ತೂರಿದ್ದಾರೆ. ಮಾಸ್ಕ್ ಇಲ್ಲದೇ, ಸಾಮಾಜಿಕ ಅಂತವನ್ನು ಕಾಯ್ದುಕೊಳ್ಳದೋ, ಚುನಾವಣಾ ಪ್ರಚಾರದಲ್ಲಿ ತೊಡಗಿರೋದು, ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ನಿಮಿತ್ತವಾಗಿ ನಗರದ 25ನೇ ವಾರ್ಡಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಸಮಾಜ ಕಲ್ಯಾಣ ಸಚಿವ ಬಿ ಶ್ರೀರಾಮುಲ ಪ್ರಚಾರ ನಡೆಸುತ್ತಿದ್ದಾರೆ. ಪಕ್ಷದ ಮುಖಂಡರು, ಪದಾಧಿಕಾರಿಗಳೊಂದಿಗೆ ನಗರದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕೊರೋನಾ ಸೋಂಕಿನ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸ ಬೇಕಾದಂತ ಸಚಿವರೇ, ನಿರ್ಲಕ್ಷ್ಯ ತೋರಿದ್ದಾರೆ ಎನ್ನಲಾಗುತ್ತಿದೆ.ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವಂತ ಸಚಿವ ಬಿ ಶ್ರೀರಾಮು, ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಪಾಡದೇ ಮತಪ್ರಚಾರದಲ್ಲಿ ತೊಡಗಿರೋದು ಕಂಡು ಬಂದಿದೆ. ಈ ಮೂಲಕ ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನೇ ಗಾಳಿಗೆ ತೂರಿರೋದಾಗಿ ಕೇಳಿ ಬರುತ್ತಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ