Breaking News

ಬ್ರೇಕಿಂಗ್: ಸಿಎಂ ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್

Spread the love

ಬೆಂಗಳೂರು,ಏ.22- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ವರದಿ ನೆಗೆಟಿವ್ ಬಂದಿದ್ದು ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಪುನಃ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅವರಿಗೆ ನೆಗೆಟಿವ್ ಬಂದಿರುವುದರಿಂದ ಮಣಿಪಾಲ್ ಆಸ್ಪತ್ರೆಯಿಂದ ಇಂದು ಬಿಡುಗಡೆಯಾದರು.

ಕಳೆದ ವಾರ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಪಟ್ಟಿದ್ದರು. ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕೆಲ ದಿನಗಳ ಮಟ್ಟಿಗೆ ಮನೆಯಲ್ಲೇ ಹೋಂ ಕ್ವಾರಂಟೈನ್‍ಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಲ್ಲಿದ್ದರೂ ಯಡಿಯೂರಪ್ಪನವರು ಸಚಿವರು, ಅಕಾರಿಗಳು , ವೈದ್ಯರು ಸೇರಿದಂತೆ ಮತ್ತಿತರ ಜೊತೆ ವಚ್ರ್ಯುವಲ್ ಮೂಲಕ ಸಭೆ ನಡೆಸಿದ್ದರು.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ