Breaking News

ಮದುವೆ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ

Spread the love

ಚಿಕ್ಕೋಡಿ: ಕೊರೊನಾ ರಣಕೇಕೆ ಹಿನ್ನೆಲೆ ರಾಜ್ಯಾದ್ಯಂತ ಸಭೆ, ಮದುವೆ ಸಮಾರಂಭಗಳಿಗೆ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೋವಿಡ್ ನಿಯಮದ ನಡುವೆಯೂ ಅದ್ಧೂರಿ ಮದುವೆ ಆಯೋಜಿಸಿದ್ದ ವಧ ವರನ ಮೇಲೆ ಪ್ರಕರಣ ದಾಖಲಾಗಿದೆ.

ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸುರುವ ಕೊರೊನಾ ಟಫ್ ರೂಲ್ಸ್ ಬ್ರೇಕ್ ಮಾಡಿ ಸಂಕೇಶ್ವರ ಪಟ್ಟಣದ ನೀಡಸೊಸಿ ರಸ್ತೆಯಲ್ಲಿರುವ ಮಿಲನ್ ಹಾಲ್ ದಲ್ಲಿ ಅದ್ಧೂರಿ ಮದುವೆ ಆಯೋಜನೆ ಮಾಡಿಕೊಂಡಿದ್ದರು. ಮದುವೆಗೆ ಐವತ್ತು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅದು ಕೂಡ ತಹಶೀಲ್ದಾರ್ ಕಚೇರಿಯಿಂದ ಪಾಸ್ ಪಡೆಯಬೇಕು. ಆದ್ರೆ ಮದುವೆಯಲ್ಲಿ ಎಲ್ಲ ನಿಯಮಗಳನ್ನ ಬ್ರೇಕ್ ಮಾಡಲಾಗಿತ್ತು.

ಹುಬ್ಬಳ್ಳಿ ಮೂಲದ ವರ ಕಾರ್ತಿಕ್ ಗಾಯಕ್ವಾಡ, ವಧು ಮೇಘ ಹಾಗೂ ಕಲ್ಯಾಣ ಮಂಟಪದ ಮಾಲೀಕ ಝಾಕರೀಯಾ ಸೇರಿದಂತೆ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಮದುವೆ ನಡೆದಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ