Breaking News

ಯುವಕರ ಜೊತೆ ಪ್ರೇಯಸಿಯ ಚಾಟಿಂಗ್ ನೋಡಿ ಪ್ರಿಯಕರ ಮಾಡಿದ್ದೇನು ಗೊತ್ತಾ..?

Spread the love

ಮೈಸೂರು: ಪ್ರೇಯಸಿಯ ನಡತೆ ಪ್ರಶ್ನಿಸಿ ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಹರ್ಷ ರಸ್ತೆಯಲ್ಲಿ ನಡೆದಿದೆ. ನಂಜನಗೂಡಿನ ಶ್ರೀರಾಂಪುರದ 26 ವರ್ಷದ ಯುವತಿ ಪ್ರಿಯಕರನಿಂದ ಹಲ್ಲೆಗೊಳಗಾದ ಯುವತಿ. ಹೆಚ್.ಡಿ. ಕೋಟೆ ತಾಲೂಕಿನ ಅಂತರಸಂತೆಯ ನಿವಾಸಿ ರಮೇಶ್ ಎಂಬಾತನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.

ಮೈಸೂರಿನ ಖಾಸಗಿ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ರಮೇಶ್ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆಕೆಗೆ ಬರುತ್ತಿದ್ದ ಮೆಸೇಜ್​ಗಳನ್ನು ತನ್ನ ಮೊಬೈಲ್​​ಗೆ ಬರುವಂತೆ ರಮೇಶ್ ಮಾಡಿಕೊಂಡಿದ್ದ. ಕೆಲವು ಯುವಕರ ಜೊತೆ ಯುವತಿ ಚಾಟ್ ಮಾಡಿದ್ದರಿಂದ ಈಕೆಯ ವಿರುದ್ಧ ತಿರುಗಿ ಬಿದ್ದು, ನಡತೆ ಬಗ್ಗೆ ರಮೇಶ್ ಶಂಕೆ ವ್ಯಕ್ತಪಡಿಸಿದ್ದಾನೆ.

ಇದರಿಂದ ರೊಚ್ಚಿಗೆದ್ದ ಈತ, ಲವ್ ಬ್ರೇಕ್​​ಅಪ್​​ ಮಾತುಕತೆ ನಡೆಸುವುದಾಗಿ ಯುವತಿಯನ್ನು ಕರೆಸಿ ಚಾಕುವಿನಿಂದ ಇರಿದಿದ್ದಾನೆ. ಸಾರ್ವಜನಿಕರೇ ಆರೋಪಿ ರಮೇಶ್​ನನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿ, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ