ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ಯಡವಟ್ಟಿನಿಂದಾಗಿ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿಗಳು ಕಳೆದೆರಡು ದಿನಗಳಿಂದ ಅನ್ನ ನೀರಿಗಾಗಿ ಪರದಾಡುತ್ತಿರುವ ಘಟನೆ ಚಿತ್ರದುರ್ಗ ನಗರದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ನಲ್ಲಿ ನಡೆದಿದೆ.
ಕೊರೊನಾ ಕಾರಣ ಹೇಳಿ ಆರೋಗ್ಯ ಇಲಾಖೆ ಏಕಾ ಏಕಿ ಹಾಸ್ಟೆಲ್ ಬಂದ್ ಮಾಡಿದ್ದು.. ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿಗಳ ಬಟ್ಟೆ ಲಗೇಜನ್ನು ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ದಾವಣಗೆರೆ ವಿಶ್ವವಿದ್ಯಾನಿಲಯದ ಬಿ. ಎಡ್ ಎಕ್ಸಾಮ್ ಹಿನ್ನಲೆ ಹಾಸ್ಟೆಲ್ನಲ್ಲಿ ಪರೀಕ್ಷಾ ಸಿದ್ಧತೆ ನಡೆಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಹಾಸ್ಟೆಲ್ ಹೊರಗಡೆ ಲಗೇಜ್ ಹಿಡಿದುನಿಂತ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿ, ಇಲ್ಲವೇ ಹಾಸ್ಟೆಲ್ ವ್ಯವಸ್ಥೆ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಊಟ ಕೊಡಿ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.