Home / Uncategorized / ಕೊರೊನಾ ನಿಯಮ ಪಾಲನೆಗೆ ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ

ಕೊರೊನಾ ನಿಯಮ ಪಾಲನೆಗೆ ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ

Spread the love

ಬೆಳಗಾವಿ: ಕೊರೊನಾ ಎರಡನೇ ಅಲೆ ರಾಜ್ಯದಾದ್ಯಂತ ತೀವ್ರವಾಗಿದ್ದು, ರಾಜ್ಯ ಸರ್ಕಾರ ಸೋಂಕಿನ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಈ ನಡುವೆ ಜನರಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಬೆಳಗಾವಿ ಮಹಾನಗರ ಪಾಲಿಗೆ ಅಧಿಕಾರಿಗಳು ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಮಹಾನಗರ ಪಾಲಿಕೆ ಮಾರ್ಷಲ್​​ಗಳು ನಗರದ ಬೀದಿಗಳಲ್ಲಿ ಒಂಟಿ ಏರಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದು, ಕೊರೊನಾ ನಿಯಮ ಪಾಲನೆ ಮಾಡಿ, ಪ್ರಾಣ ಕಾಪಾಡಿ. ತಪ್ಪದೇ ಮಾಸ್ಕ್​​ ಧರಿಸಿ ಸಂಚಾರ ಮಾಡಿ, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಮೈಕ್​ ಹಿಡಿದು ಮಾಹಿತಿ ನೀಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳ ಕಾರ್ಯ ಸಾರ್ವಜನಿಕರ ಗಮನ ಸೆಳೆಯಲು ಯಶಸ್ವಿಯಾಗಿದೆ.


Spread the love

About Laxminews 24x7

Check Also

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the loveಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ