Breaking News
Home / ಜಿಲ್ಲೆ / ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

Spread the love

ಬೆಂಗಳೂರು: ಜಮಾತಿಗೆ ಹೋದವರಿಂದಲೇ ಕೊರೊನಾ ಹಬ್ಬತ್ತಿದೆ ಅನ್ನೋ ಚರ್ಚೆ, ಒಂದು ಸಮುದಾಯ ಗುರಿಯಾಗಿಸಿರುವ ವಿಚಾರವಾಗಿದೆ. ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಕೆಲವರು ಇದೇ ರೀತಿ ವರ್ತನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಈಗಾಗಲೇ ಕಮೀಷನರ್ ಹೇಳಿದ್ದಾರೆ ಎಂದರು.

ಅಂತೆಯೇ, ಇಂದಿರಾ ಕ್ಯಾಂಟಿನ್ ನಿಲ್ಲಿಸಬಾರದು, ಉದ್ಯೋಗ ಸಿಗುವವರೆಗೂ ಊಟ ಕೊಡಬೇಕು. ನೀರಾವರಿ, ಲೋಕೋಪಯೋಗಿ ಇಲಾಖೆ ಕೆಲಸ ನಿಲ್ಲಿಸಲಿ. 15 ದಿನಕ್ಕೆ 15 ಕೋಟಿ ಖರ್ಚು ಆಗುತ್ತೆ ಅಷ್ಟೇ. ಖರ್ಚು ಆಗುತ್ತೆ ಅಂತ ನಿಲ್ಲಿಸುವುದು ಬೇಡ ಎಂದು ಡಿಕೆಶಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸದ್ಯ ಕೆಪಿಸಿಸಿಯಿಂದ ಕೊರೊನಾ ರಿಲೀಫ್ ಫಂಡ್ ಮಾಡಿದ್ದೇವೆ. ದೇಣಿಗೆ ನೀಡುವಂತೆ ಮುಖಂಡರಿಗೆ ಮನವಿ ಮಾಡಿದ್ದೇನೆ. ಎಲ್ಲ ಶಾಸಕರು, ಸಂಸದರು, ಮಾಜಿ ಶಾಸಕರು ಸ್ಪಂದಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ನಿಮ್ಮ ಸರ್ಕಾರದ ಕೆಲ ಸಚಿವರಲ್ಲಿ ಗೊಂದಲ ಇದೆ ಅಂತ ಹೇಳಿದ್ವಿ. ಅದಕ್ಕೂ ಸಿಎಂ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಸರಿಪಡಿಸಿದ್ದಾರೆ. ವಿಪಕ್ಷವಾಗಿ ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ ಎಂದರು.


Spread the love

About Laxminews 24x7

Check Also

ಹೋಟೆಲ್ ರೂಮಿನಲ್ಲಿ ಇಬ್ಬರು ಪುರುಷರೊಂದಿಗೆ ವಿವಾಹಿತ ಮಹಿಳೆಯ ಚೆಲ್ಲಾಟ

Spread the love ಇತ್ತೀಚಿನ ದಿನಗಳಲ್ಲಿ ವಿವಾಹಿತ ಪುರುಷರು ಮತ್ತು ಮಹಿಳೆಯರ ಅಕ್ರಮ ಸಂಬಂಧದ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಇಂತಹದ್ದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ