Breaking News

ತಾಲೂಕು, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲು ಶಿಫಾರಸ್ಸು

Spread the love

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಎಲ್ಲ ಚುನಾವಣೆಗಳನ್ನೂ ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದ್ದಾರೆ. ಮುಂದಿನ 14 ದಿನ ಜನತಾ ಕರ್ಫ್ಯೂ ಜಾರಿಯಾಗಲಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಲಾಗುವುದು. ಪರಿಸ್ಥಿತಿ ಸುಧಾರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

ತಾಲೂಕು, ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಚುನಾವಣೆಗಳನ್ನೂ ಪರಿಸ್ಥಿತಿ ಸುಧಾರಿಸುವವರೆಗೂ ಮುಂದೂಡುವಂತೆ ರಾಜ್ಯ ಸರಕಾರ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ಈಚೆಗೆ ನಡೆದ ಉಪ ಚುನಾವಣೆಗಳಿಂದಾಗಿಯೇ ಕೊರೋನಾ ಶರವೇಗದಲ್ಲಿ ಹರಡಿದೆ ಎನ್ನುವ ಆರೋಪ ಕೇಳಿ ಬಂದಿತ್ತು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ