Breaking News

ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ

Spread the love

ಬೆಂಗಳೂರು: ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ. ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ ಒಳಗೆ ಸಂಚರಿಸಲಿರುವ ಬಸ್ಸುಗಳ ಈ ವಿಶೇಷ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆoದು ತಿಳಿಸಿದ್ದಾರೆ.

ನಾಳೆ ರಾತ್ರಿಯ ಒಳಗೆ ತಮ್ಮ ಸ್ಥಳಕ್ಕೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ, ನಿಗದಿತ ಕೋವಿಡ್ ಮಾರ್ಗಸೂಚಿ ಅನ್ವಯ ಮುಂಜಾಗ್ರತೆ ವಹಿಸಿ ಈ ಸಾರಿಗೆ ವ್ಯವಸ್ಥೆಯನ್ನು ಸೂಕ್ತವಾಗಿ ಬಳಸಿಕೊಳ್ಳಬಹುದಾಗಿದೆ ಎಂದು ವಿವರಿಸಿದ್ದಾರೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ