Breaking News

ಸಿರಗುಪ್ಪ ಬಳಿ ಕಾರು- ಲಾರಿ ನಡುವೆ ಭೀಕರ ಅಪಘಾತ: ಚಿಂಚೋಳಿಯ ನಾಲ್ವರ ಸಾವು

Spread the love

ಚಿಂಚೋಳಿ(ಕಲಬುರ್ಗಿ ಜಿಲ್ಲೆ): ಕೋವಿಡ್ ನಿಯಂತ್ರಣಕ್ಕಾಗಿ ಜಾರಿ ಮಾಡಿದ ಲಾಕ್‌ಡೌನ್ ಕಾರಣ ಸ್ವಗ್ರಾಮಕ್ಕೆ ಬರುವಾಗ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಸುಕಿನ 1.45ರ ಸುಮಾರಿಗೆ ನಡೆದಿದೆ.

ಮೃತರು ಚಿಂಚೋಳಿ ತಾಲ್ಲೂಕಿನ ಚಿಮ್ಮಾಈದಲಾಯಿ ಮತ್ತು ಕೊರಡಂಪಳ್ಳಿ ಗ್ರಾಮದವರಾಗಿದ್ದಾರೆ.

ಲಾಕ್‌ಡೌನ್ ಜಾರಿಯಿಂದಾಗಿ ಬೆಂಗಳೂರಿನಿಂದ ಕಾರಿನಲ್ಲಿ ಬರುವಾಗ ಲಾರಿ ಗುದ್ದಿದೆ ಆಗ ಬಳ್ಳಾರಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ (ತಂದೆ) ಬಸವರಾಜ ಭೀಮರಾವ ಬೆಳ್ಳೂರು(52), ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ (ಮಗ)ಭೀಮರಾವ ಬೆಳ್ಳೂರು (30), ಖಾಸಗಿ ಕಂಪೆನಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬಿಇ ಪದವಿಧರ ಸುನೀಲ ಶಿವರಾಜ ಪಾಟೀಲ‌(30), ಕಾರಿನ ಚಾಲಕ ಕೊರಡಂಪಳ್ಳಿಯ ರೇವಣಸಿದ್ದ ಬಸವರಾಜ ಕೊರಡಂಪಳ್ಳಿ(30) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ