Breaking News

ಸಂತಸ ಮೂಡಿಸಿದ ಲಾಕ್ ಡೌನ್: 22 ವರ್ಷಗಳ ನಂತರ ಮನೆಗೆ ಮಗ ಬಂದ!

Spread the love

ಹಾಸನ: ಕೋವಿಡ್ ನಿಯಂತ್ರಿಸಲು ವಿಧಿಸಲಾಗಿರುವ ಲಾಕ್ ಡೌನ್ ಬಹಳಷ್ಟು ಜನರ ನೆಮ್ಮದಿಗೆಡಿಸಿದೆ. ಕೆಲಸ ಕಾರ್ಯವಿಲ್ಲದೆ ದಿನದೂಡುವುದೇ ಕಷ್ಟವಾಗಿದೆ. ಆದರೆ ಇಲ್ಲೊಂದು ಮನೆಯಲ್ಲಿ ಲಾಕ್ ಡೌನ್ ಸಂತಸಕ್ಕೆ ಕಾರಣವಾಗಿದೆ. ಮನೆ ಬಿಟ್ಟು ಹೋಗಿದ್ದ ಮಗ 22 ವರ್ಷಗಳ ನಂತರ ಮನೆಗೆ ವಾಪಸ್ಸಾಗಿದ್ದು ಹೆತ್ತವರಲ್ಲಿ ಸಂತಸ ಮೂಡಿಸಿದೆ.

ಹಾಸನ ತಾಲೂಕು ಶಾಂತಿಗ್ರಾಮ ಹೋಬಳಿ ಹೊಂಗರೆ ಗ್ರಾಮದ ರಾಜೇಗೌಡ ಮತ್ತು ಅಕ್ಕಯ್ಯಮ್ಮ ದಂಪತಿ ಪುತ್ರ ಶೇಖರ್‌ (38) ಮನೆಗೆ ವಾಪಸ್ಸಾದವ.

 

ಈತ, 18 ವರ್ಷದವನಿದ್ದಾಗಲೇ ಮನೆ ಬಿಟ್ಟು ಹೋಗಿದ್ದ. ಆದರೆ, ಈಗ ಲಾಕ್‌ಡೌನ್‌ ಜಾರಿಯಾದ ಸಂದರ್ಭದಲ್ಲಿ ದಿಢೀರನೆ ಮನೆಗೆ ವಾಪಸ್ಸಾಗಿದ್ದಾನೆ. ಮಗ ಬದುಕಿದ್ದಾನೋ ಇಲ್ಲವೋ ಎಂಬ ಚಿಂತೆಯಲ್ಲಿದ್ದ ವೃದ್ಧ ದಂಪತಿಗೆ ಮಗ ವಾಪಸ್ಸಾಗಿರುವುದು ಸಂತಸ ತಂದಿದೆ.

ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಶೇಖರ್‌ ವಿವಿಧ ಕೆಲಗಳನ್ನು ಮಾಡಿಕೊಂಡು ದಿನ ದೂಡುತ್ತಿದ್ದ ಎನ್ನಲಾಗಿದೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ