Breaking News

ನಿವೃತ್ತ ನ್ಯಾಯಮೂರ್ತಿಯೊಬ್ಬರು ರಾಜ್ಯಪಾಲರ ಹುದ್ದೆಗಾಗಿ ಲಂಚ ನೀಡಿರುವುದು ದುರದೃಷ್ಟಕರ!

Spread the love

ಬೆಂಗಳೂರು: ಉನ್ನತ ಹುದ್ದೆಗಳನ್ನು ಕೊಡಿಸುವುದಾಗಿ ಗಣ್ಯ ವ್ಯಕ್ತಿಗಳನ್ನು ನಂಬಿಸಿ ವಂಚಿಸಿದ್ದ ಆ‌ರೋಪದಲ್ಲಿ ಬಂಧಿತನಾಗಿರುವ ಯುವರಾಜ್‌ ಸ್ವಾಮಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ನ್ಯಾಯಪೀಠ, ಜಾಮೀನು ನೀಡಲು ನಿರಾಕರಿಸಿದೆ.

ಅಲ್ಲದೆ, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರೇ ರಾಜ್ಯಪಾಲರ ಹುದ್ದೆಗಾಗಿ ಅರ್ಜಿದಾರನಿಗೆ ಲಂಚ ನೀಡಿರುವುದು ದುರದೃಷ್ಟಕರ, ಇದರಿಂದ ನ್ಯಾಯಮೂರ್ತಿಯ ಹುದ್ದೆಯ ಘನತೆ ಕುಗ್ಗಿರುವುದಲ್ಲದೆ, ರಾಜ್ಯಪಾಲರ ಹುದ್ದೆಯ ಘನತೆಗೂ ಕುಂದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪೊಲೀಸರು ಇನ್ನೂ ಆತನ ಅಪರಾಧದ ಬಗ್ಗೆ ಸಾಕ್ಷಿ ಸಂಗ್ರಹಿಸುತ್ತಿದ್ದಾರೆ. ಅರ್ಜಿದಾರರನ್ನು ಜಾಮೀನಿನ ಮೇಲೆ ಹೊರಗೆ ಬಿಟ್ಟರೆ ಆತ ಸಾಕ್ಷಿ ನಾಶ ಮಾಡಬಹುದು ಮತ್ತು ನಾಪತ್ತೆಯಾಗಬಹುದು ಎಂದು ನ್ಯಾಯಾಲಯ ಹೇಳಿದೆ


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ