Breaking News

ನಿವೃತ್ತ ನ್ಯಾಯಮೂರ್ತಿಯೊಬ್ಬರು ರಾಜ್ಯಪಾಲರ ಹುದ್ದೆಗಾಗಿ ಲಂಚ ನೀಡಿರುವುದು ದುರದೃಷ್ಟಕರ!

Spread the love

ಬೆಂಗಳೂರು: ಉನ್ನತ ಹುದ್ದೆಗಳನ್ನು ಕೊಡಿಸುವುದಾಗಿ ಗಣ್ಯ ವ್ಯಕ್ತಿಗಳನ್ನು ನಂಬಿಸಿ ವಂಚಿಸಿದ್ದ ಆ‌ರೋಪದಲ್ಲಿ ಬಂಧಿತನಾಗಿರುವ ಯುವರಾಜ್‌ ಸ್ವಾಮಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ನ್ಯಾಯಪೀಠ, ಜಾಮೀನು ನೀಡಲು ನಿರಾಕರಿಸಿದೆ.

ಅಲ್ಲದೆ, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಯೊಬ್ಬರೇ ರಾಜ್ಯಪಾಲರ ಹುದ್ದೆಗಾಗಿ ಅರ್ಜಿದಾರನಿಗೆ ಲಂಚ ನೀಡಿರುವುದು ದುರದೃಷ್ಟಕರ, ಇದರಿಂದ ನ್ಯಾಯಮೂರ್ತಿಯ ಹುದ್ದೆಯ ಘನತೆ ಕುಗ್ಗಿರುವುದಲ್ಲದೆ, ರಾಜ್ಯಪಾಲರ ಹುದ್ದೆಯ ಘನತೆಗೂ ಕುಂದಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪೊಲೀಸರು ಇನ್ನೂ ಆತನ ಅಪರಾಧದ ಬಗ್ಗೆ ಸಾಕ್ಷಿ ಸಂಗ್ರಹಿಸುತ್ತಿದ್ದಾರೆ. ಅರ್ಜಿದಾರರನ್ನು ಜಾಮೀನಿನ ಮೇಲೆ ಹೊರಗೆ ಬಿಟ್ಟರೆ ಆತ ಸಾಕ್ಷಿ ನಾಶ ಮಾಡಬಹುದು ಮತ್ತು ನಾಪತ್ತೆಯಾಗಬಹುದು ಎಂದು ನ್ಯಾಯಾಲಯ ಹೇಳಿದೆ


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ