Breaking News

ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ ಇಲ್ಲಾ ಸಾರ್ 30 ಸಾವಿರ ಓಟ್‍ನಲ್ಲಿ ಗೆಲ್ಲುತ್ತೇನೆ ಎಂದ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬೆಳಗಾವಿ ಕ್ಷೇತ್ರದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರಿಗೆ ಹೇಳಿದ್ದಾರೆ

ಉಪಚುನಾವಣೆಯಲ್ಲಿ ಇಗಾಗಲೇ ಮಸ್ಕಿ ಕ್ಷೇತ್ರದಲ್ಲಿ ಗೆಲುವಿನ ನಗೆಬೀರಿರುವ ಕಾಂಗ್ರೆಸ್ ಬೆಳಗಾವಿ ಕ್ಷೇತ್ರದ ರಿಸಲ್ಟ್‍ಗಾಗಿ ಕಾಯುತ್ತಿದೆ. ಏನಯ್ಯ ಸತೀಶ್ ಟೆನ್ಷನ್ ಕೊಡ್ತಿದಿಯಲ್ಲಪ್ಪ. ಇಲ್ಲಾ ಸಾರ್ 30 ಸಾವಿರ ಓಟ್‍ನಲ್ಲಿ ಗೆಲ್ಲುತ್ತೇನೆ ಎಂದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಒಳ್ಳೆದಾಗಲಿ ಗೆದ್ದು ಬಾ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಮಸ್ಕಿ ಕ್ಷೇತ್ರದಲ್ಲಿ ಗೆಲವು ಸಾಧಿಸಿದ ಬಸವನಗೌಡ ತುರವಿಹಾಳ್‍ಗೆ ಶುಭ ಹಾರೈಸಿದ ಸಿದ್ದರಾಮಯ್ಯ. ಅಭಿನಂದನೆ ಕಣಯ್ಯ ನಿನಗೆ. 2 ವರ್ಷ ಟೈಮಿದೆ ಚೆನ್ನಾಗಿ ಕೆಲಸ ಮಾಡಿ ಮತ್ತೆ ನೀನೆ ಗೆಲ್ಲಬೇಕು. ನಾಳೆ ಎಂಎಲ್‍ಗಳ ವಚ್ರ್ಯೂವಲ್ ಮೀಟಿಂಗ್ ಕರೆದಿದ್ದೇನೆ ನೀನು ಭಾಗವಹಿಸು. ಲಾಕ್‍ಡೌನ್ ಎಲ್ಲಾ ಮುಗಿದ ಮೇಲೆ ಬಂದು ಭೇಟಿ ಅಗಯ್ಯ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.

ಮಸ್ಕಿಯಲ್ಲಿ ದೊಡ್ಡ ಮಟ್ಟದ ಗೆಲುವು ಸಾಧಿಸಿದ್ದೇವೆ. ಮಸ್ಕಿ ಕ್ಷೇತ್ರದ ಅಭ್ಯರ್ಥಿ ತುರುವಿಹಾಳ್‍ಗೆ ಕರೆ ಮಾಡಿ ಅಭಿನಂದನೆ ಹೇಳಿದ್ದೇನೆ. ಯಾರೂ ಸಂಭ್ರಮ ಮಾಡದಂತೆ ಸೂಚನೆ ನೀಡಿದ್ದೇನೆ. ಲಾಕ್‍ಡೌನ್ ಮುಗಿದ ನಂತರ ಬಂದು ಭೇಟಿ ಆಗುವಂತೆ ಸೂಚನೆ ಕೊಡಲಾಗಿದೆ. ಕಾರ್ಯಕರ್ತರು ಯಾರೂ ಸಂಭ್ರಮ ಮಾಡಬಾರದು ಕೋವಿಡ್ ನಿಯಮ ಪಾಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ