Breaking News

ಫೇಸ್​​ಬುಕ್​ನಲ್ಲಿ ಪರಿಚಯ ಮಾಡ್ಕೊಂಡು ವಿಡಿಯೋ ಕಾಲ್​ನಲ್ಲಿ ನೀಚ ಕೃತ್ಯ :ಈ ಕಿಲಾಡಿ ಲೇಡಿ ಇಂದ ಹುಷಾರಾಗಿರಿ….

Spread the love

ನಲ್ಗೊಂಡ: ಸಾಮಾಜಿಕ ಜಾಲತಾಣದಲ್ಲಿ ಪರಿಚಯ ಮಾಡಿಕೊಂಡು, ನಂಬಿಸಿ ಹಣ ಪಡೆದುಕೊಂಡು ವಂಚಿಸುತ್ತಿದ್ದ ಕಿಲಾಡಿ ಲೇಡಿಯನ್ನು ನಲ್ಗೊಂಡ ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ.

ಆರೋಪಿಯನ್ನು ತೆಲಂಗಾಣದ ಖಮ್ಮಮ್​ ಜಿಲ್ಲೆಯ ಸತ್ತುಪಲ್ಲಿ ನಿವಾಸಿ ಪಂತಂಗಿ ಮಹೇಶ್ವರಿ ಅಲಿಯಾಸ್​ ಧರಣಿ ರೆಡ್ಡಿ ಎಂದು ಗುರುತಿಸಲಾಗಿದೆ. ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯಳಾಗಿರುವ ಮಹೇಶ್ವರಿ, ಅನೇಕ ಯುವಕರಿಗೆ ಮದುವೆ ಹೆಸರಿನಲ್ಲಿ ನಂಬಿಸಿ ಹಣ ಪಡೆದುಕೊಂಡು ವಂಚನೆ ಮಾಡಿದ್ದಾಳೆ.

ಇತ್ತೀಗೆಚೆ ಈಕೆ ಹೈದರಾಬಾದ್​​ನ ಕೊಂಪಲ್ಲಿ ಮೂಲದ ವೆಂಕಟೇಶ್​ ಎಂಬಾತನನ್ನು ಫೇಸ್​ಬುಕ್​ ಮೂಲಕ ಪರಿಚಯ ಮಾಡಿಕೊಂಡಿದ್ದಳು. ಆತನೊಂದಿಗೆ ಅಶ್ಲೀಲ ವಿಡಿಯೋ ಚಾಟ್​ ಮಾಡಿದ್ದ ಈಕೆ ಅದನ್ನು ರೆಕಾರ್ಡ್​ ಮಾಡಿಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟು, ಹಣವನ್ನು ಪಡೆದುಕೊಂಡಿದ್ದಳು. ಇನ್ನೊಂದೆಡೆ ಯುವಕರಿಗೆ ಮಾತ್ರವಲ್ಲದೆ ಅನೇಕ ಯುವತಿಯರಿಗೆ ಈಕೆ ವಂಚಿಸಿದ್ದಾಳೆ. ಸೂಕ್ತ ವರನನ್ನು ಹುಡುಕಿಕೊಡುತ್ತೇನೆಂದು ಹೇಳಿ, ಅವರಿಂದ ಹಣ ಪಡೆದುಕೊಂಡು ವಂಚನೆ ಮಾಡಿದ್ದಾಳೆ.

ಫೇಸ್​ಬುಕ್​ ಪ್ರೊಫೈಲ್​ನಲ್ಲಿ ಫೋಟೋ ಬದಲಾಯಿಸಿ ಕಿಲಾಡಿ ಲೇಡಿ ವಂಚನೆ ಮಾಡುತ್ತಿದ್ದಳು. ಇತ್ತೀಚೆಗೆ ಈಕೆ 11.70 ಲಕ್ಷ ರೂ. ಅನ್ನು ಪಡೆದುಕೊಂಡಿದ್ದಳು. ಇವಳಿಂದ ಡಜನ್​ಗೂ ಅಧಿಕ ಮಂದಿ ಮೋಸ ಹೋಗಿದ್ದಾರೆ.

ಮಹೇಶ್ವರಿ ನಲ್ಗೊಂಡ ಪೊಲೀಸ್​ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದು, ಆಕೆಯನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಈಕೆಯ ವಿರುದ್ಧ ಕುಕಟಪಲ್ಲಿ, ಘಾಟ್ಕೇಸರ್​, ಖಮ್ಮಮ್​, ಸತ್ತುಪಲ್ಲಿ ಮತ್ತು ವೆನ್ಸುನ್​ ಸೇರಿದಂತೆ ವಿವಿಧ ಠಾಣೆಗಳಲ್ಲಿ ದೂರು ದಾಖಲಾಗಿವೆ. ಇದೀಗ ನಲ್ಗೊಂಡ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಶಿಕ್ಷೆ ಅನುಭವಿಸುತ್ತಿದ್ದಾಳೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ