Breaking News

ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಮೃತ ಮಹಿಳೆಯ ಮಾಂಗಲ್ಯ ಸರ ಕಳವು

Spread the love

ಚಿಕ್ಕಬಳ್ಳಾಪುರ: ಕೋವಿಡ್ ಸೋಂಕಿನಿಂದ ಮೃತಳಾದ ಮಹಿಳೆಯ ಮಾಂಗಲ್ಯ ಸರಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ನಡೆದಿದೆ. ಅಂದಾರ್ಲಹಳ್ಳಿ ಗ್ರಾಮದ ಲಕ್ಷ್ಮಮ್ಮ ಕೊರೊನಾ ದಿಂದ ಮೃತಪಟ್ಟಿದ್ದರು. ಮೃತದೇಹ ಪಡೆಯಲು ಬಂದ ಸಂಬಂಧಿಕರು ಮೃತ ಮಹಿಳೆಯ ಮೈಮೇಲೆ ಇದ್ದ ಆಭರಣಗಳನ್ನು ಕೇಳಿದ್ದಾರೆ. ಈ ವೇಳೆ ಮೊದಲು ಬೆಳ್ಳಿ ಕಾಲು ಚೈನ್ ತದನಂತರ ಬಂಗಾರದ ಕಿವಿ ಒಲೆ ತಂದುಕೊಟ್ಟಿದ್ದಾರೆ. ಆದರೆ ಮಾಂಗಲ್ಯ ಸರ ಎಲ್ಲಿ ಅಂತ ಕೇಳಿದ್ರ ಯಾರ ಬಳಿಯೂ ಉತ್ತರ ಇರಲಿಲ್ಲ.

ಇದರಿಂದ ಮೃತಳ ಸಂಬಂಧಿಕರು ಆಸ್ಪತ್ರೆ ಸಿಬ್ಬಂದಿ ವಿರುದ್ದ ಆಸಮಾಧಾನ ಹೊರ ಹಾಕಿ ಸದ್ಯ ಎಸ್ಪಿ, ಡಿವೈಎಸ್ಪಿ ಗಮನಕ್ಕೆ ತಂದು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ಪಿ ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ