Breaking News

ಬೆಡ್​ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ಇಬ್ಬರ ಬಂಧನ; ಸಂಸದ-ಶಾಸಕರು ಪ್ರಕರಣ ಬಯಲಿಗೆಳೆದ ಬೆನ್ನಿಗೇ ಎಫ್​ಐಆರ್

Spread the love

ಬೆಂಗಳೂರು: ರಾಜ್ಯದ ಒಟ್ಟಾರೆ ಸೋಂಕಿನ ಪೈಕಿ ಅತಿಹೆಚ್ಚು ರಾಜ್ಯದ ರಾಜಧಾನಿಯಲ್ಲೇ ಇದ್ದು, ಸೋಂಕಿತರು ಸರಿಯಾದ ಸಮಯಕ್ಕೆ ಹಾಸಿಗೆ, ಐಸಿಯು, ಆಕ್ಸಿಜನ್ ಸಿಗದೆ ಒದ್ದಾಡುತ್ತಿದ್ದರೆ ಒಂದಷ್ಟು ಮಂದಿ ಇಂಥ ಸಂದರ್ಭದಲ್ಲೂ ಬೆಡ್ ಬ್ಲಾಕಿಂಗ್ ಮಾಡಿಸಿ ಹಣ ಮಾಡಿಕೊಳ್ಳುತ್ತಿದ್ದಾರೆ. ಅಂಥ ಪ್ರಕರಣವನ್ನು ಸಂಸದ-ಶಾಸಕರು ಜತೆಯಾಗಿ ಬಯಲಿಗೆಳೆದ ಬೆನ್ನಿಗೇ ಇಬ್ಬರು ಆರೋಪಿಗಳ ಬಂಧನವಾಗಿದೆ.

ಬೆಡ್​ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ರೋಹಿತ್ ಮತ್ತು ನೇತ್ರಾ ಎಂಬಿಬ್ಬರು ಏಜೆಂಟ್​ಗಳನ್ನು ಬಂಧಿಸಿದ್ದಾರೆ. ಬೆಡ್​ ಬ್ಲಾಕಿಂಗ್ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳ ಮೇಲೆ ಎಫ್​ಐಆರ್ ದಾಖಲಿಸಲಾಗಿದೆ.

ಈ ದಂಧೆಯ ಹಿಂದೆ ಇವರಿಬ್ಬರಲ್ಲದೆ ಇನ್ನೂ ಕೆಲವರು ಇರುವ ಶಂಕೆ ಇದ್ದು, ಪೊಲೀಸರು ಮತ್ತಷ್ಟು ತನಿಖೆಗೆ ಮುಂದಾಗಿದ್ದಾರೆ. ಬೆಡ್​ ಬ್ಲಾಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್ ರೆಡ್ಡಿ, ಉದಯ್ ಗರುಡಾಚಾರ್ ಅವರು ಪೊಲೀಸರೊಂದಿಗೆ ಸ್ಥಳಕ್ಕೇ ತೆರಳಿ ಬಯಲಿಗೆಳೆದಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ