Breaking News

ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭ

Spread the love

ಚಿಕ್ಕೋಡಿ: ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ಆರಂಭಿಸಲಾಗಿದ್ದು, ಸೋಂಕಿತರಿಗೆ ಆಕ್ಸಿಜನ್ ಬೆಡ್ ಸಹಿತ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ವತಿಯಿಂದ ಆರಂಭಿಸಿರುವ ಕೋವಿಡ್ ಕೇರ್ ಆಸ್ಪತ್ರೆಗೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ ನೀಡಿದರು. ಜೊಲ್ಲೆ ಒಡೆತನದ ಶಿವಶಂಕರ ಜೊಲ್ಲೆ ಪಬ್ಲಿಕ್ ಶಾಲೆಯಲ್ಲಿ ಕೋವಿಡ್ ಕೇರ್ ಆಸ್ಪತ್ರೆ ತೆರೆಯಲಾಗಿದೆ. ಈ ಆಸ್ಪತ್ರೆಯಲ್ಲಿ ಕೊವಿಡ್ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ.

ಒಟ್ಟು 16 ಆಕ್ಸಿಜನ್ ಬೆಡ್ ಸೇರಿದಂತೆ 50 ಬೆಡ್ ಗಳ ಆಸ್ಪತ್ರೆಯನ್ನು ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ವಿಶೇಷ ಕಾಳಜಿಯಿಂದ ಆರಂಭಿಸಲಾಗಿದೆ.

ಸರ್ಕಾರದ ಸಹಭಾಗಿತ್ವದಲ್ಲಿ ಈ ಆಸ್ಪತ್ರೆ ಆರಂಭಿಸಿದರೂ ರೋಗಿಗಳ ಊಟೋಪಚಾರ, ನುರಿತ ವೈದ್ಯರ ವೇತನ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ಖರ್ಚು ವೆಚ್ಚವನ್ನ ಜೊಲ್ಲೆ ಉದ್ಯೋಗ ಸಮೂಹ ಭರಿಸಲಿದೆ. ಬಡ ರೋಗಿಗಳೂ ಆಸ್ಪತ್ರೆಯ ಲಾಭ ಪಡೆಯುವಂತೆ ಸಚಿವೆ ಶಶಿಕಲಾ ಜೊಲ್ಲೆ ವಿನಂತಿಸಿದ್ದಾರೆ. ಶಶಿಕಲಾ ಜೊಲ್ಲೆ ಅವರ ಕಾರ್ಯಕ್ಕೆ ಸಾರ್ವಜನಿಕ ಪ್ರಶಂಸೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ