Breaking News

ಸರಿಯಾದ ಸಮಯಕ್ಕೆ ವೆಂಟಿಲೇಟರ್ ಬೆಡ್ ಸಿಗದೇ ನಾಲ್ವರು ರೋಗಿಗಳು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Spread the love

ಬೆಳಗಾವಿ: ಸರಿಯಾದ ಸಮಯಕ್ಕೆ ವೆಂಟಿಲೇಟರ್ ಬೆಡ್ ಸಿಗದೇ ನಾಲ್ವರು ರೋಗಿಗಳು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಎರಡು ಗಂಟೆಯಲ್ಲಿ ನಾಲ್ವರು ರೋಗಿಗಳು ಕುಟುಂಬಸ್ಥರ ಮುಂದೆಯೇ ನರಳಿ ನರಳಿ ಪ್ರಾಣ ಬಿಟ್ಟಿದ್ದಾರೆ.

ನಾಲ್ಕು ಗಂಟೆಗಳ ಹಿಂದೆ 56 ವರ್ಷ ವ್ಯಕ್ತಿಯನ್ನ ಬೆಳಗಾವಿಯ ಬಿಮ್ಸ್ ಗೆ ಕರೆತರಲಾಗಿತ್ತು. ಆಕ್ಸಿಜನ್ ಬೆಡ್ ನೀಡುವಂತೆ ರೋಗಿಯ ಸಂಬಂಧಿ ಆಸ್ಪತ್ರೆಯ ಸಿಬ್ಬಂದಿ ಬಳಿ ಮನವಿ ಮಾಡಿಕೊಳ್ಳುತ್ತಿದ್ದರು. ಬೆಡ್ ಸಿಗುವ ವೇಳೆಗಾಗಲೇ ವ್ಯಕ್ತಿಯ ಪ್ರಾಣಪಕ್ಷಿ ಹಾರಿ ಹೋಗಿತ್ತು. ಇದರಿಂದ ಆಕ್ರೋಶಗೊಂಡ ಮಹಿಳೆ, ಇಷ್ಟು ದೊಡ್ಡ ಆಸ್ಪತ್ರೆಯಲ್ಲಿ ನಮಗೆ ಬೆಡ್ ಸಿಗಲಿಲ್ಲ. ಸರ್ಕಾರಕ್ಕೆ ಒಂದು ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಡಲು ಸಾಧ್ಯ ಆಗಲಿಲ್ಲ. ಮನುಷ್ಯರ ಜೀವ ಉಳಿಸುವ ಮಾನವೀಯತೆ ಸಹ ಇಲ್ಲಿಲ್ಲ ಎಂದು ಸರ್ಕಾರಕ್ಕೆ ಹಿಡಿ ಶಾಪ ಹಾಕಿದರು.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರೋರಿಗೆ ಬೆಡ್, ಆಕ್ಸಿಜನ್ ಸಿಗುತ್ತಿಲ್ಲ. ನನ್ನ ಮುಂದೆಯೇ ವೆಂಟಿಲೇಟರ್ ಇಲ್ಲದೇ ನಾಲ್ವರು ಸಾವನ್ನಪ್ಪಿದ್ದಾರೆ. ನಾವುಇ ಕರೆದುಕೊಂಡ ಬಂದ ರೋಗಿಯ ಪಲ್ಸ್ ರೇಟ್ ಕಡಿಮೆ ಆಗಿತ್ತು. ಆ ವೇಳೆಗೆ ಆಕ್ಸಿಜನ್ ಬಂದಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ರೋಗಿಗಳ ಸಂಬಂಧಿಕರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳುವಂತೆ ಹೇಳಲಾಗುತ್ತಿದೆ. ಹೊರಗಡೆ ಚಿಕ್ಕ ಚಿಕ್ಕ ಆಕ್ಸಿಜನ್ ಸಿಲಿಂಡರ್ ಗಳು ಟೋಕನ್ ವ್ಯವಸ್ಥೆಯಲ್ಲಿ ಸಿಗುತ್ತಿವೆ. ನಮಗೆ ಆಕ್ಸಿಜನ್ ಸಿಲಿಂಡರ್ ತರಲು ಹೇಳಿದ್ರೆ ಹೇಗೆ ಎಂದು ಯುವಕ ಪ್ರಶ್ನೆ ಮಾಡಿದ್ದಾನೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ