Breaking News

ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಸೇರಿ ಹಲವು ಪೊಲೀಸರು ಮುಂಬೈನಿಂದ ವರ್ಗಾವಣೆ!

Spread the love

ಮುಂಬೈ: ಎನ್ ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ಪೊಲೀಸ್ ಅಧಿಕಾರಿ ದಯಾ ನಾಯಕ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಮುಂಬೈನಿಂದ ಇತರ ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಉಗ್ರ ನಿಗ್ರಹ ದಳದಲ್ಲಿದ್ದ ದಯಾ ನಾಯಕ್ ಅವರನ್ನು ಗೊಂಡಿಯಾ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಮಹಾರಾಷ್ಟ್ರ ಎಡಿಜಿ ಅವರು ಈ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.

ದಯಾ ನಾಯಕ್ ಅವರು ಮನ್ಸುಖ್ ಹಿರೇನ್ ಕೊಲೆ ಪ್ರಕರಣದ ತನಿಖೆ ನಡೆಸಿದ್ದರು. ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ಈ ಪ್ರಕರಣದಲ್ಲ ದಯಾ ನಾಯಕ್ ಅವರು ಹಲವು ಸಾಕ್ಷ್ಯಗಳನ್ನು ಒಟ್ಟುಗೂಡಿಸಿದ್ದರು. ಸದ್ಯ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆ ನಡೆಸುತ್ತಿದೆ.

ಸಚಿನ್ ವಾಜೆ ಪ್ರಕರಣ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಸಂಚಲನ ಉಂಟು ಮಾಡಿದೆ. ಸದ್ಯ ದಯಾ ನಾಯಕ್ ಸೇರಿದಂತೆ ಹಲವು ಪ್ರಮುಖ ಪೊಲೀಸ್ ಅಧಿಕಾರಿಗಳ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಹಲವು ಅನುಮಾನಗಳಿಗೆ ಕಾರಣವಾಗಿದೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ