Breaking News

ಎಲ್ಲರನ್ನು ಕಳುಹಿಸಿ ಕೊನೆಗೆ ಮನೆ ತಲುಪಿದ ಧೋನಿ

Spread the love

ರಾಂಚಿ: ಕೊರೊನಾದಿಂದಾಗಿ 14ನೇ ಆವೃತ್ತಿಯ ಐಪಿಎಲ್ ಅರ್ಧದಲ್ಲೇ ಸ್ಥಗಿತಗೊಂಡಿದೆ. ಆಟಗಾರರೆಲ್ಲ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ತಂಡದ ಆಟಗಾರೆಲ್ಲ ಮನೆಗೆ ಸೇರಿದ ಬಳಿಕ ಕೊನೆಯವರಾಗಿ ಮನೆಗೆ ತೆರಳಿದ್ದಾರೆ.

ಸಿಎಸ್‍ಕೆ ತಂಡದ ಆಟಗಾರರೆಲ್ಲರನ್ನು ಕೂಡ ಸುರಕ್ಷಿತವಾಗಿ ಮನೆಗೆ ತಲುಪಿಸುವ ಹೊಣೆ ಹೊತ್ತಿದ್ದ ಚೆನ್ನೈ ಫ್ರಾಂಚೈಸಿ, ಆಟಗಾರರನ್ನು ಮನೆಗೆ ತಲುಪಿಸಲು ವಿಮಾನದ ವ್ಯವಸ್ಥೆ ಮಾಡಿತ್ತು. ಈ ವಿಮಾನದಲ್ಲಿ ಮೊದಲು ವಿದೇಶಿ ಆಟಗಾರರು ತೆರಳಿದ ಬಳಿಕ ದೇಶೀಯ ಅಟಗಾರರು ತೆರಳಿ ನಂತರ ಕೊನೆಯವರಾಗಿ ಧೋನಿ ತೆರಳುವ ನಿರ್ಧಾರ ಕೈಗೊಂಡಿದ್ದರು. ಈ ಮೂಲಕ ತನ್ನ ತಂಡದ ಸದಸ್ಯರ ಬಗ್ಗೆ ಧೋನಿಗಿರುವ ಕಾಳಜಿಯನ್ನು ಮತ್ತೊಮ್ಮೆ ತೋರಿಸಿದ್ದಾರೆ.

ಐಪಿಎಲ್ ರದ್ದುಗೊಳ್ಳುತ್ತಿದ್ದಂತೆ ಸಿಎಸ್‍ಕೆ ತಂಡ ಆಟಗಾರರೆಲ್ಲ ಡೆಲ್ಲಿಯ ಹೋಟೆಲ್ ಒಂದರಲ್ಲಿ ಬಿಡುಬಿಟ್ಟಿದ್ದರು. ಅಲ್ಲಿ ಸಿಎಸ್‍ಕೆ ತಂಡ ಸುದೀರ್ಘವಾದ ಸಭೆಯೊಂದನ್ನು ನಡೆಸಿತ್ತು. ಈ ಸಭೆಯಲ್ಲಿ ಧೋನಿ ಚೆನ್ನೈ ಫ್ರಾಂಚೈಸಿಯೊಂದಿಗೆ ಆಟಗಾರರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದರ ಕುರಿತು ಮಾತನಾಡುವ ವೇಳೆ ಮೊದಲು ವಿದೇಶಿ ಆಟಗಾರರು ತೆರಳಲಿ ಬಳಿಕ ದೇಶೀಯ ಆಟಗಾರರು ತಮ್ಮ ತಮ್ಮ ಮನೆಗೆ ತೆರಳಲಿ ಬಳಿಕ ಕೊನೆಯದಾಗಿ ನಾನು ಮನೆ ಸೇರುತ್ತೇನೆ ಎಂದಿದ್ದರು. ಹಾಗಾಗಿ ಚೆನ್ನೈ ತಂಡದ ಆಡಳಿತ ಮಂಡಳಿ ಚಾರ್ಟರ್ ಫ್ಲೈಟ್ ಆಯೋಜನೆ ಮಾಡಿ ಆಟಗಾರರನೆಲ್ಲ ಮನೆಗೆ ಸುರಕ್ಷಿತವಾಗಿ ತಲುಪಿಸಿದೆ. ಬಳಿಕ ಧೋನಿ ತನ್ನ ಮಾತಿನಂತೆ ಗುರುವಾರ ಸಂಜೆ ತಮ್ಮ ರಾಂಚಿಯ ನಿವಾಸಕ್ಕೆ ತಲುಪಿದ್ದಾರೆ.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ