Breaking News

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸ್ಥಗಿತ – ಸಿಎಂ ಮನೆಗೆ ಸಂಸದ ಸಿದ್ದೇಶ್ವರ್ ಮುತ್ತಿಗೆ ಎಚ್ಚರಿಕೆ

Spread the love

ಬೆಂಗಳೂರು: ದೇಶದಲ್ಲಿ ಇಲ್ಲಿವರೆಗೆ 16 ಕೋಟಿ 49 ಲಕ್ಷದ 73 ಸಾವಿರದ 058 ಜನರಿಗೆ ವ್ಯಾಕ್ಸಿನೇಷನ್ ಆಗಿದೆ. ಆದರೆ ವ್ಯಾಕ್ಸಿನ್ ಕೊರತೆ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡದಂತೆ ಆಸ್ಪತ್ರೆಗಳಿಗೆ ಬಿಬಿಎಂಪಿ ಆದೇಶಿಸಿದೆ.

ಆದರೆ 70 ಲಕ್ಷ ಜನರು ಮೊದಲ ಡೋಸ್ ಪಡೆದಿದ್ದಾರೆ. 2ನೇ ಡೋಸ್ ಪಡೆಯೋರಿಗೆ ಆದ್ಯತೆ ಮೇಲೆ ಲಸಿಕೆ ಕೊಡ್ತೀವಿ ಅಂತ ಸಚಿವ ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನ ಮಲ್ಲತ್ತಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರು 45 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್‍ಗಾಗಿ ಕಿತ್ತಾಡಿ, ಕೂಗಾಡಿದ ಘಟನೆಯೂ ನಡೆದಿದೆ.

ದಾವಣಗೆರೆಗೆ ಅಗತ್ಯ ವ್ಯಾಕ್ಸಿನ್ ನೀಡದಿದ್ದರೆ ಸಿಎಂ ಮನೆ ಮುಂದೆ ಧರಣಿ ಮಾಡ್ತೇನೆ ಅಂತ ಸಂಸದ ಸಿದ್ದೇಶ್ವರ್ ಧಮ್ಕಿ ಹಾಕಿದ್ದಾರೆ. ಈ ಮಧ್ಯೆ, ಕೊರೋನಾ ಕಾಲದಲ್ಲಿ ಮತ್ತೆ ಉಸ್ತುವಾರಿ ಸಚಿವರನ್ನು ಬದಲಾಯಿಸಿ ಸಿಎಂ ಆದೇಶಿಸಿದ್ದಾರೆ. ಲಿಂಬಾವಳಿಗೆ ಕೋಲಾರ, ಶಂಕರ್‍ಗೆ ಯಾದಗಿರಿ ಮತ್ತು ಪ್ರಭು ಚೌಹಾಣ್‍ಗೆ ಬೀದರ್ ಉಸ್ತುವಾರಿ ನೀಡಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ