Breaking News
Home / ರಾಜಕೀಯ / ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ

Spread the love

ನವದೆಹಲಿ : ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ.

ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ.

ಎಲ್ಲ ರಾಜ್ಯ ಮುಖ್ಯಮಂತ್ರಿಗಳೊಡನೆ ನಿರಂತರ ಸಂಪರ್ಕದಲ್ಲಿರುವ ಮೋದಿ, ರಾಜ್ಯದ ಸ್ಥಿತಿಗತಿಗಳನ್ನು ತಿಳಿದುಕೊಂಡು ಅಗತ್ಯ ಸಲಹೆಯನ್ನೂ ನೀಡುತ್ತಿದ್ದಾರೆ.

ನಿನ್ನೆಯಷ್ಟೇ ಮಹಾರಾಷ್ಟ್ರ, ಆಂಧ್ರ ಪ್ರದೇಶ, ಹಾಗೂ ಮಧ್ಯ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಿದ್ದ ಮೋದಿ, ಇಂದು ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳಿಗೆ ಕರೆ ಮಾಡಿದ್ದಾರೆ.

 

https://twitter.com/explore/tabs/covid-19?ref_src=twsrc%5Etfw%7Ctwcamp%5Etweetembed%7Ctwterm%5E1391313250692648963%7Ctwgr%5E%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fudayavani-epaper-udayavani%2Fkarnaatakaserinaalkuraajyagalasiengalajotepradhaanimodisamaalochane-newsid-n278033468

 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ