Breaking News

ವೆಂಟಿಲೇಟರ್ ಬೆಡ್ ಸಿಗದೇ ಮೂವರ ದುರ್ಮರಣ; ಮುಂಡರಗಿ ಆಸ್ಪತ್ರೆಯಲ್ಲಿ ದುರಂತ

Spread the love

ಗದಗ: ರಾಜ್ಯದಲ್ಲಿ ಮತ್ತೆ ಆಕ್ಸಿಜನ್, ವೆಂಟಿಲೇಟರ್ ಗಾಗಿ ಹಾಹಾಕಾರ ಆರಂಭವಾಗಿದೆ. ವೆಂಟಿಲೇಟರ್ ಬೆಡ್ ಇಲ್ಲದೇ ಮೂವರು ಕೊರೊನಾ ಸೋಂಕಿತರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ಆಸ್ಪತ್ರೆಯಲ್ಲಿ ನಡೆದಿದೆ.

ನಿನ್ನೆ ರಾತ್ರಿಯಿಂದ ಇಂದು ಬೆಳಗಿನವರೆಗೆ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ಮುಂಡರಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೇ ಸೋಂಕಿತರು ಪರದಾಡುತ್ತಿದ್ದು, ನಿನ್ನೆ ರಾತ್ರಿ 55 ವರ್ಷದ ಮಹಿಳೆ ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ನಡುವೆ ಆಸ್ಪತ್ರೆಯಲ್ಲಿ ಇನ್ನಿಬ್ಬರು ಸೋಂಕಿತರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಆಸ್ಪತ್ರೆಯ ವೈದ್ಯರು, ಜಿಲ್ಲಾಧಿಕಾರಿಗಳು ವೆಂಟಿಲೇಟರ್ ಬೆಡ್ ವ್ಯವಸ್ಥೆ ಮಾಡಿಕೊಡುವಂತೆ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಯಾರೊಬ್ಬರೂ ಇತ್ತ ಗಮನಹರಿಸುತ್ತಿಲ್ಲ ಎಂದು ಸೋಂಕಿತರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ