Breaking News

ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿ ,ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ

Spread the love

ಹುಬ್ಬಳ್ಳಿ ಬೆಳಗಾವಿ: ಎರಡನೇ ಹಂತದ ಕೋವಿಡ್ ಕರ್ಫ್ಯೂಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಹನಗಳ ಸಂಚಾರ ಕೂಡ ಕಡಿಮೆಯಾಗಿದೆ. ವಿನಾಕಾರಣ ರಸ್ತೆಗಳಿದ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ.

ಬೆಳಿಗ್ಗೆ 7:೦೦ ಗಂಟೆಯಿಂದಲೇ ಪೊಲೀಸರು ರಸ್ತೆಗಿಳಿದಿದ್ದು, ಮಾರ್ಗಸೂಚಿ ಉಲ್ಲಂಘಿಸಿ ಅಗತ್ಯ ವಸ್ತುಗಳ ಖರೀದಿಗೆ ತಂದಿದ್ದ ಸುಮಾರು 87 ವಾಹನಗಳನ್ನು ಜಪ್ತಿ ಮಾಡಲಾಗಿದೆ. 10 ಗಂಟೆಯ ನಂತರ ಚೆಕ್ ಪೋಸ್ಟ್ ಗಳನ್ನು ಬಿಗಿಗೊಳಿಸಿ ಪ್ರತಿಯೊಂದು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಕಾಲ್ನಡಿಗೆಯಲ್ಲಿ ಬಂದವರನ್ನು ಕೂಡ ವಿಚಾರಿಸಲಾಗುತ್ತಿದೆ.

ಮಹಾನಗರ ಪೊಲೀಸ್ ಆಯುಕ್ತ ಲಾಭೂ ರಾಮ, ಡಿಸಿಪಿ ಕೆ.ರಾಮರಾಜನ್, ಬಸರಗಿ ಸೇರಿದಂತೆ ಹಿರಿಯ ಅಧಿಕಾರಿಗಳು ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ‌ ಸ್ವತಃ ವಾಹನಗಳ ತಪಾಸಣೆ ನಡೆಸಿದರು. ವಿನಾಕಾರಣ ಬಂದ ವಾಹನಗಳನ್ನು ಜಪ್ತಿ ಮಾಡುವಂತೆ ಸೂಚಿಸಿದರು.

ವಿನಾಕಾರಣ ವಾದ ಮಾಡುವವರ ಮೇಲೆ ಪ್ರಕರಣ ದಾಖಲಿಸುವಂತೆ ಸೂಚಿಸಿದರು. ಕೆಲ ಅನುಮಾನಗಳಿಗೆ ಪೊಲೀಸ್ ಅಧಿಕಾರಿಗಳು ಫೋನ್ ಕರೆ ಮೂಲಕ ಖಚಿತಪಡಿಸಿಕೊಂಡು ವಾಹನಗಳನ್ನು ಬಿಟ್ಟು ಕಳುಹಿಸಿದರು. ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರೆ ಯಾವುದೇ ಮುಲಾಜಿಯಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಲಾಭೂರಾಮ ಎಚ್ಚರಿಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ