ಬೆಂಗಳೂರು: ಕೊರೊನಾದಿಂದ ಬಳಲುತ್ತಿರುವ ಕರ್ನಾಟಕಕ್ಕೆ ಇಸ್ರೇಲ್ ದೇಶದಿಂದ ಇಂದು ರಾಜ್ಯಕ್ಕೆ 2 ಆಕ್ಸಿಜನ್ ಜನರೇಟರ್ಗಳನ್ನು ನೀಡುವ ಮೂಲಕವ ನೆರವು ನೀಡಿದೆ.
ಇಂಡಿಯಾಕ್ಕೆ ಸಾಕಷ್ಟು ಬೆಂಬಲವನ್ನು ನೀಡಬಲ್ಲವು ಎಂದು ಹೆಮ್ಮೆಪಡುತ್ತವೆ. ಆಕ್ಸಿಜನ್ ಜನರೇಟರ್ಗಳನ್ನು ನಾವು ಕರ್ನಾಟಕಕ್ಕೆ ನೀಡುತ್ತೇವೆ. 100 ಕ್ಕಿಂತ ಹೆಚ್ಚು ರೋಗಿಗಳಿಗೆ ಸಾಕಾಗುಷ್ಟು ಆಕ್ಸಿಜನ್ ಉತ್ಪಾದಿಸುತ್ತೇವೆ ಎಂದು ಇಸ್ರೇಲ್ ರಾಯಭಾರಿ ಮಾಹಿತಿ ನೀಡಿದ್ದಾರೆ.
ಸಂಕಷ್ಟದ ಸಮಯದಲ್ಲಿ ಇಸ್ರೇಲ್ ಆಕ್ಸಿಜನ್ ಸಿಲಿಂಡರ್ಗಳನ್ನು ರಾಜ್ಯಕ್ಕೆ ಕಳುಹಸುತ್ತಿರುವುದಕ್ಕೆ ಧನ್ಯವಾದಗಳು. ಈ ಆಕ್ಸಿಜನ್ ಸಿಲಿಂಡರ್ಗಳಿಂದಾಗಿ ರಾಜ್ಯದಲ್ಲಿ ಎದುರಾಗಿರುವ ಆಕ್ಸಿಜನ್ ಕೊರತೆಯ ಸಮಸ್ಯೆ ಕೊಂಚವಾದರೂ ಸುಧಾರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದಾರೆ.
ಕೊರೊನಾ ಸಂಕಷ್ಟಕ್ಕೆ ಹಲವರು ಬೇರೆ ಬೇರೆ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಆಕ್ಸಿಜನ್, ಅಸ್ಪತ್ರೆ ಬೆಡ್, ಊಟ, ಆರ್ಥಿಕ ಸಹಾಯ ಹೀಗೆ ಹಲವು ರೀತಿಯಲ್ಲಿ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುತ್ತಿದ್ದಾರೆ.
Laxmi News 24×7