Breaking News

ಗೃಹಸಚಿವ ಬಸವರಾಜ ಬೊಮ್ಮಾಯಿ ಮನೆ, ಇದೀಗ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ

Spread the love

ಹಾವೇರಿ: ಗೃಹಸಚಿವ ಬಸವರಾಜ ಬೊಮ್ಮಾಯಿ ತಮ್ಮ ಮನೆಯನ್ನೇ ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸುವ ಮೂಲಕ ಹಾವೇರಿಯಲ್ಲಿ ಮೂಡುತ್ತಿರುವ ಕೊರೋನ ಸೋಂಕನ ಪ್ರಭಾವವನ್ನು ಕಡಿಮೆಗೊಳಿಸಲು ಮುಂದಾಗಿದ್ದಾರೆ.

ಇದೇ ಮೊದಲ ಬಾರಿಗೆ ಸಚಿವರೊಬ್ಬರ ನಿವಾಸವನ್ನು ಕೋವಿಡ್ ಕೇರ್ ಕೇಂದ್ರ ಮಾಡಲಾಗಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಬಸವರಾಜ ಬೊಮ್ಮಾಯಿ ನಿವಾಸದ ವರಾಂಡವನ್ನು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಮಾರ್ಪಡಿಸಿ 50 ಬೆಡ್​ಗಳ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ವ್ಯವಸ್ಥೆ ಕೂಡ ಅಲ್ಲಿ ಮಾಡಲಾಗಿದೆ.

ಇದರಿಂದ ಶಿಗ್ಗಾವಿ ಆಸ್ಪತ್ರೆಯಲ್ಲಿ ಬೆಡ್ ನ ಕೊರತೆ ಕಡಿಮೆಯಾಗಲಿದೆ, ತಮ್ಮ ಮನೆಯ ಆವರಣದಲ್ಲಿ ನಿರ್ಮಿಸಲಾಗಿರುವ ಕೋವಿಡ್ ಕೇರ್ ಕೇಂದ್ರ ಪರಿಶೀಲಿಸಿ ಮಾತನಾಡಿದ ಅವರು ದಿನದ 24 ಗಂಟೆಯೂ ರೋಗಿಗಳ ಚಿಕಿತ್ಸೆಗಾಗಿ ಸಿಬ್ಬಂದಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ.

ತಮ್ಮ ಕುಟುಂಬ ಹುಬ್ಬಳ್ಳಿಯಲ್ಲಿ ವಾಸವಿದ್ದು, ತಾವು ಕ್ಷೇತ್ರಕ್ಕೆ ಭೇಟಿ ನೀಡಿದಾಗ ಮಾತ್ರ ಶಿಗ್ಗಾವಿ ಮನೆಯಲ್ಲಿರುವುದಾಗಿ ತಿಳಿಸಿದರು.


Spread the love

About Laxminews 24x7

Check Also

RSS ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ: ಸಚಿವ ಪ್ರಿಯಾಂಕ ಖರ್ಗೆ

Spread the loveಕಲಬುರಗಿ: “ಆರ್​ಎಸ್​ಎಸ್​ನಲ್ಲಿನ ಮನುಸ್ಮೃತಿಯನ್ನು ಬಿಜೆಪಿ ಮುಖಂಡರು ಅವರ ಮನೆಯಲ್ಲಿ ಜಾರಿಗೆ ತರಲಿ. ಕೊಳಕು ಮನಸ್ಸು, ಕೊಳಕು ಬುದ್ದಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ