Breaking News
Home / ರಾಜಕೀಯ / ತಾಯಿ ಅಂತ್ಯಕ್ರಿಯೆ ಮುಗಿಸಿದ ಕೆಲವೇ ಕ್ಷಣದಲ್ಲಿ ಮಗನೂ ಸಾವು!

ತಾಯಿ ಅಂತ್ಯಕ್ರಿಯೆ ಮುಗಿಸಿದ ಕೆಲವೇ ಕ್ಷಣದಲ್ಲಿ ಮಗನೂ ಸಾವು!

Spread the love

ಕೊಳ್ಳೇಗಾಲ: ಕೋವಿಡ್‌ನಿಂದ ಮೃತ್ತಪಟ್ಟ ತಾಯಿಯ ಶವಸಂಸ್ಕಾರ ಮಾಡಲು ಹೋದ ಮಗ ಹೃದಯಾಘಾತದಿಂದ ತಾನೂ ಮೃತಪಟ್ಟಿರುವ ಘಟನೆ ಶನಿವಾರ ಪಟ್ಟಣದಲ್ಲಿ ಜರುಗಿದೆ.

ಪಟ್ಟಣದ ನಿವಾಸಿ ಹಾಗೂ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ ಆತ್ತೆ ಸರೋಜಮ್ಮ (82) ಹಾಗೂ ಆಕೆಯ ಮಗ ಸುರೇಶ್ (60) ಮೃತ್ತ ಮೃತಪಟ್ಟವರು.

ಶುಕ್ರವಾರ ಸರೋಜಮ್ಮ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೋಂ ಐಸೋಲೇಶನ್‌ನಲ್ಲಿದ್ದರು. ಈ ಸಂದರ್ಭದಲ್ಲೇ ಅವರು ಮೃತಪಟ್ಟಿದ್ದಾರೆ.

ಚಾ.ನಗರ ತಾಲ್ಲೂಕು ಹುಳ್ಳಿನಂಜಪುರ ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ಸರೋಜಮ್ಮ ಅಂತ್ಯಕ್ರಿಯೆ ನಡೆಸಿ ವಾಪಸ್ಸು ಬರುವ ವೇಳೆ ಈಕೆಯ ಮಗ ಸುರೇಶ್‌ಗೆ ಎದೆ ನೋವು ಕಾಣಿಸಿಕೊಂಡು ಕಾರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳಿಕ ಸುರೇಶ್ ಅವರ ಶವವನ್ನು ಕೊರೊನಾ ಪರೀಕ್ಷಗೆ ಒಳಪಡಿಸಿ, ನೆಗಟಿವ್ ಬಂದ ನಂತರ ಶವಸಂಸ್ಕಾರ ನಡೆಸಲಾಯಿತು.


Spread the love

About Laxminews 24x7

Check Also

ಗೃಹಲಕ್ಷ್ಮೀ ಹಣದಿಂದ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಡ ಮಹಿಳೆ

Spread the love ರಾಮದುರ್ಗ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ