Breaking News

ತಾಯಿ ಅಂತ್ಯಕ್ರಿಯೆ ಮುಗಿಸಿದ ಕೆಲವೇ ಕ್ಷಣದಲ್ಲಿ ಮಗನೂ ಸಾವು!

Spread the love

ಕೊಳ್ಳೇಗಾಲ: ಕೋವಿಡ್‌ನಿಂದ ಮೃತ್ತಪಟ್ಟ ತಾಯಿಯ ಶವಸಂಸ್ಕಾರ ಮಾಡಲು ಹೋದ ಮಗ ಹೃದಯಾಘಾತದಿಂದ ತಾನೂ ಮೃತಪಟ್ಟಿರುವ ಘಟನೆ ಶನಿವಾರ ಪಟ್ಟಣದಲ್ಲಿ ಜರುಗಿದೆ.

ಪಟ್ಟಣದ ನಿವಾಸಿ ಹಾಗೂ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಅವರ ಆತ್ತೆ ಸರೋಜಮ್ಮ (82) ಹಾಗೂ ಆಕೆಯ ಮಗ ಸುರೇಶ್ (60) ಮೃತ್ತ ಮೃತಪಟ್ಟವರು.

ಶುಕ್ರವಾರ ಸರೋಜಮ್ಮ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಹೋಂ ಐಸೋಲೇಶನ್‌ನಲ್ಲಿದ್ದರು. ಈ ಸಂದರ್ಭದಲ್ಲೇ ಅವರು ಮೃತಪಟ್ಟಿದ್ದಾರೆ.

ಚಾ.ನಗರ ತಾಲ್ಲೂಕು ಹುಳ್ಳಿನಂಜಪುರ ಗ್ರಾಮದ ಅವರ ಸ್ವಂತ ಜಮೀನಿನಲ್ಲಿ ಸರೋಜಮ್ಮ ಅಂತ್ಯಕ್ರಿಯೆ ನಡೆಸಿ ವಾಪಸ್ಸು ಬರುವ ವೇಳೆ ಈಕೆಯ ಮಗ ಸುರೇಶ್‌ಗೆ ಎದೆ ನೋವು ಕಾಣಿಸಿಕೊಂಡು ಕಾರಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳಿಕ ಸುರೇಶ್ ಅವರ ಶವವನ್ನು ಕೊರೊನಾ ಪರೀಕ್ಷಗೆ ಒಳಪಡಿಸಿ, ನೆಗಟಿವ್ ಬಂದ ನಂತರ ಶವಸಂಸ್ಕಾರ ನಡೆಸಲಾಯಿತು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ