Breaking News

”ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ, ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ”

Spread the love

ಬೆಂಗಳೂರು, ಮೇ 16: ಕೋವಿಡ್ ಮೊದಲ ಅಲೆಯ ನಂತರ ಜನರು, ಸರಕಾರದಿಂದ ನಿರ್ಲಕ್ಷ್ಯ ಉಂಟಾಯಿತು ಎಂಬ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆ ನೀಡಿದ್ದು, ಇದನ್ನು ಉಲ್ಲೇಖಿಸಿದ ರಾಜ್ಯ ಕಾಂಗ್ರೆಸ್ ‘ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ. ಇನ್ನಾದರೂ ವಾಸ್ತವ ಅರಿತು ಕೆಲಸ ಮಾಡಿ’ ಎಂದು ರಾಜ್ಯ ಸರಕಾರವನ್ನು ಕುಟುಕಿದೆ.

ಕೊರೋನ ಸಾಂಕ್ರಾಮಿ ರೋಗದ ಮೊದಲ ಅಲೆಯ ನಂತರ ರಾಷ್ಟ್ರದ ಎಲ್ಲಾ ವರ್ಗದವರು ತೋರಿಸಿರುವ ನಿರ್ಲಕ್ಷ್ಯವು ದೇಶಾದ್ಯಂತ ಈಗ ತಲೆದೋರಿರುವ ವೈದ್ಯಕೀಯ ಬಿಕ್ಕಟ್ಟಿಗೆ ಕಾರಣವಾಗಿದೆ. ಕೊರೋದ ಮೊದಲ ಅಲೆಯ ನಂತರ ನಾವೆಲ್ಲರೂ ನಿರ್ಲಕ್ಷ್ಯ ವಹಿಸಿದ್ದೇವೆ. ಜನರು, ಸರಕಾರಗಳು, ಆಡಳಿತ ನಿರ್ಲಕ್ಷ್ಯ ತೋರಿದವು ಎಂದು ಮೋಹನ್ ಭಾಗವತ್ ಹೇಳಿದ್ದರು.

ಇದನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಕಾಂಗ್ರೆಸ್, ”ನಿರ್ಲಕ್ಷ್ಯ ವಹಿಸಿದ್ದೀರಿ ಎಂದು ನಾವು ಹೇಳಿದರೆ ‘ರಾಜಕೀಯ’ ಎಂದಿರಿ, ರಾಹುಲ್ ಗಾಂಧಿ ಅವರ ಎಚ್ಚರಿಕೆಯನ್ನು ಕಡೆಗಣಿಸಿ ಟೀಕಿಸಿದಿರಿ, ಈಗ ನಿಮ್ಮ ಶಂಖದಿಂದಲೇ ತೀರ್ಥ ಬಂದಿದೆ. ಇನ್ನಾದರೂ ‘ಇಮೇಜ್ ಬಿಲ್ಡಿಂಗ್’ ಬಿಟ್ಟು ವಾಸ್ತವ ಅರಿತು ಕೆಲಸ ಮಾಡಿ, ದೇಶದ ಆರ್ಥಿಕ ಸಂಪನ್ಮೂಲ ಕಳೆದಾಗಿದೆ, ಮಾನವ ಸಂಪನ್ಮೂಲವನ್ನಾದರೂ ಕಾಪಾಡಿ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

 


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ