Breaking News

ಮ ಕೊರೊನಾಗೆ ಬೆಳಗಾವಿಯಲ್ಲಿ ಶಿಕ್ಷಕ ಅಣ್ಣ-ತಮ್ ಬಲಿ

Spread the love

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ಇದೀಗ ಶಿಕ್ಷಕರಾಗಿದ್ದ ಅಣ್ಣ-ತಮ್ಮ ಇಬ್ಬರೂ ಮಹಾಮಾರಿಗೆ ಬಲಿಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ತೋಪಿನಕಟ್ಟಿ ಸರ್ಕಾರಿ ಶಾಲೆ ಶಿಕ್ಷಕರಾಗಿದ್ದ ಸಹೋದರರಿಬ್ಬರೂ 4 ದಿನಗಳ ಅಂತರದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ.

ಅಣ್ಣ ಪಿ.ಕೆ.ಕುಂಬಾರ್ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಇದರ ಬೆನ್ನಲ್ಲೆ ತಮ್ಮ ನಾರಾಯಣ ಕುಂಬಾರ್ ಗೂ ಸೋಂಕು ಹರಡಿತ್ತು. ಇಬ್ಬರಿಗೂ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಾಲ್ಕು ದಿನಗಳ ಹಿಂದೆ ಅಣ್ಣ ಪಿ.ಕೆ.ಕುಂಬಾರ್ ಮೃತಪಟ್ಟಿದ್ದರೆ ಇದೀಗ ತಮ್ಮ ನಾರಾಯಣ ಕುಂಬಾರ್ ಕೂಡ ಬಲಿಯಾಗಿದ್ದಾರೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ