Breaking News

ಪ್ರಧಾನಿ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ: ದಿನೇಶ್ ಗುಂಡೂರಾವ್

Spread the love

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಆಸೆಗೆ ನಮ್ಮ ಲಸಿಕೆಯನ್ನು ವಿದೇಶಕ್ಕೆ ದಾನ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್‌ ಮೂಲಕ ಅಕ್ರೋಶ ವ್ಯಕ್ತಪಡಿಸಿದ್ದಾರೆ. ವಿದೇಶಗಳಲ್ಲೂ ಕೊರೊನಾ ಲಸಿಕೆ ಸಿದ್ಧವಾಯಿತು. ಆದರೆ, ಆ ದೇಶಗಳು ಲಸಿಕೆಯನ್ನು ತಮ್ಮಲ್ಲೇ ಉಳಿಸಿಕೊಂಡವು.

ಆದರೆ, ಈ ದೇಶದ ಪ್ರಧಾನಿಯವರು ಮಾಡಿದ್ದೇನು?. ಅತ್ತೆ ಒಡವೆಯನ್ನು ಅಳಿಯ ದಾನ ಕೊಟ್ಟಂತೆ ಪ್ರಚಾರಕ್ಕಾಗಿ ಲಸಿಕೆಯನ್ನು ವಿದೇಶಕ್ಕೆ ಕೊಟ್ಟರು. ಈಗ ದೇಶದ ಜನ ಲಸಿಕೆಗಾಗಿ ಪರದಾಡುತ್ತಿದ್ದಾರೆ. ಇದನ್ನು ಪ್ರಶ್ನಿಸುವುದು ತಪ್ಪೇ? ಹೇಳಿ ಮೋದಿಯವರೇ ಎಂದು ಕೇಳಿದ್ದಾರೆ.

ಲಸಿಕೆಯ ಪರಿಣಾಮದ ಬಗ್ಗೆ ಮಾರ್ಗಸೂಚಿ ಹೊರಡಿಸಿ ಎಂದರೆ, ಕಾಂಗ್ರೆಸ್ ಲಸಿಕೆ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ಮೋದಿಯವರು ಸುಳ್ಳು ಹೇಳುತ್ತಾರೆ. ತಮ್ಮ ಅಸಮರ್ಥತತೆಗೆ ವಿಪಕ್ಷಗಳನ್ನು ದೂರುವುದು ಎಷ್ಟು ಸರಿ?. ಕೊರೊನಾ ವಿಚಾರದಲ್ಲಿ ಮೋದಿ ಸರ್ಕಾರದ ಎಡವಟ್ಟುಗಳನ್ನು ನ್ಯಾಯಾಲಯಗಳೇ ಜನರ ಮುಂದೆ ತೆರೆದಿಟ್ಟಿದೆ. ಇದಕ್ಕಿಂತ ಇನ್ನೇನು ಬೇಕು? ಎಂದಿದ್ದಾರೆ.

ದೇಶದಲ್ಲಿ ಹಿಟ್ಲರ್‌ನ ನಾಜಿ ಆಡಳಿತವಿದೆ. ಇಲ್ಲಿ ತಪ್ಪು ಒಪ್ಪುಗಳನ್ನು ಪ್ರಶ್ನೆ ಮಾಡಿದರೆ‌ ಕೇಂದ್ರದ ದುಷ್ಟ ಸರ್ಕಾರ ಅದನ್ನು ವಿಚ್ಛಿದ್ರಕಾರಿಯಾಗಿ ದಮನ ಮಾಡುತ್ತಿದೆ. ಮೋದಿಯವರೆ, ನಿಮ್ಮ ಹಿಟ್ಲರ್ ಧೋರಣೆಗೆ ಇಲ್ಯಾರು ಜಗ್ಗುವುದಿಲ್ಲ. ನನ್ನದೂ ಬಹಿರಂಗ ಸವಾಲಿದೆ. ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಯಾಕೆ ಕಳಿಸಿದಿರಿ? ನನ್ನನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ