Breaking News

ಡಿಸಿಪಿ ಕೈಗೆ ಸಿಕ್ಕಿಬಿದ್ದ ನಕಲಿ ಪತ್ರಕರ್ತ- ಬೈಕ್ ಸೀಜ್, ಕೇಸ್ ದಾಖಲು

Spread the love

ಹುಬ್ಬಳ್ಳಿ: ಲಾಕಡೌನ್ ವೇಳೆ ಬಂದ್ ಆಗಿರುವ ಟಿವಿ ಚಾನಲ್ ಐಡಿ ಕಾರ್ಡ ಬಳಸಿ ಪೊಲೀಸರನ್ನ ಯಮಾರಿಸುತ್ತಿದ್ದ ನಕಲಿ ಪತ್ರಕರ್ತನನ್ನ ಹುಬ್ಬಳ್ಳಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಬೈಕ್ ಸೀಜ್ ಮಾಡಿದ್ದಾರೆ.

ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಬಳಿ  ಡಿಸಿಪಿ ರಾಮರಾಜನ್ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಇಂದು ಮುಂಜಾನೆ ಅನಗತ್ಯವಾಗಿ ಓಡಾಟ ಮಾಡುತ್ತಿದ್ದ ನಕಲಿ ಪತ್ರಕರ್ತನನ್ನು ಹಿಡಿದು ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ.

ಜಾನ್ ನಿಕೋಲಸ್ ಹಲವು ವರ್ಷಗಳ ಹಿಂದೇಯೇ ಬಂದ್ ಆಗಿರುವ ಟಿವಿ ಚಾನಲ್ ಐಡಿ ಕಾರ್ಡ ತೋರಿಸಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ. ಈ ವೇಳೆ ಐಡಿ ವಶಕ್ಕೆ ಪಡೆದ ಡಿಸಿಪಿ ರಾಮರಾಜನ್ ಸ್ಥಳದಲ್ಲಿದ್ದ ಇನ್ನೂಳಿದ ಪತ್ರಕರ್ತರ ಬಳಿ ಮಾಹಿತಿ ಪಡೆದ ಡಿಸಿಪಿ ರಾಮರಾಜನ್ ನಕಲಿ ಪತ್ರಕರ್ತನ ಬೈಕ್ ಸೀಜ್ ಮಾಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸಿಬ್ಬಂದಿಗಳಿಗೆ ಆದೇಶ ನೀಡಿದ್ದಾರೆ. ಹುಬ್ಬಳ್ಳಿಯ ಉಪನಗರ ಪೊಲೀಸರು ನಕಲಿ ಪತ್ರಕರ್ತನ ಬೈಕ್ ಸೀಜ್ ಮಾಡಿ ಠಾಣೆಗೆ ಕರೆದೊಯ್ಯು ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ