Breaking News
Home / ಜಿಲ್ಲೆ / ಬೀದರ್: ಜಮಾತ್‍ನಿಂದ ಬಂದವರ ತಲಾಶ್‍ಗೆ ಇಳಿದ ವೈದ್ಯರು – ಮಾಹಿತಿ ನೀಡಲು ನಕಾರ

ಬೀದರ್: ಜಮಾತ್‍ನಿಂದ ಬಂದವರ ತಲಾಶ್‍ಗೆ ಇಳಿದ ವೈದ್ಯರು – ಮಾಹಿತಿ ನೀಡಲು ನಕಾರ

Spread the love

ಬೀದರ್: ಮಹಾಮಾರಿ ಕೊರೊನಾಗೆ ಈಗಾಗಾಲೇ ವಿಶ್ವವೇ ತಲ್ಲಣವಾಗಿದ್ದು, ದೇಶದಲ್ಲಿ ಕೂಡಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಗಡಿ ಜಿಲ್ಲೆ ಬೀದರ್ ನಿಂದ ಜಮಾತ್‍ಗೆ 28 ಜನ ಹೋಗಿದ್ದಾರೆ ಎಂದು ಮೊದಲು ಮಾಹಿತಿ ಸಿಕ್ಕಿತ್ತು. ಆದರೆ ಈಗ 25 ಜನರಲ್ಲ ಈ ಸಂಖ್ಯೆ ಬಹಳ ಜಾಸ್ತಿಯಿದೆ ಎನ್ನುವ ವಿಚಾರ ಜಿಲ್ಲಾಡಳಿತಕ್ಕೆ ಸಿಕ್ಕಿದೆ.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ವಿದೇಶದಿಂದ ಹಾಗೂ ದೆಹಲಿಯ ಜಮಾತ್‍ನಿಂದ ಬಂದವರ ತಲಾಶ್‍ಗೆ ವೈದ್ಯರ ಹಾಗೂ ಆಶಾ ಕಾರ್ಯಕರ್ತೆಯರು ಫೀಲ್ಡಿಗೆ ಇಳಿದಿದ್ದಾರೆ. ಆದರೆ ಈ ವೈದ್ಯರ ಟೀಂಗೆ ಜನರು ಮಾಹಿತಿ ನೀಡಲು ಹಿಂದೇಟು ಹಾಕುತ್ತಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ವೈದ್ಯರ ಹಾಗೂ ಆಶಾ ಕಾರ್ಯಕರ್ತೆಯರು ಆತಂಕದಲ್ಲಿ ದೆಹಲಿಯಿಂದ ಬಂದ ಜನರನ್ನು ಹುಡುಕಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಜಮಾತ್ ಗೆ ಹೋಗಿದ್ದ 28 ಜನರ ಪೈಕಿ 10 ಜನಕ್ಕೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಈ ಭಯದಿಂದ ಜಿಲ್ಲಾಡಳಿತ ಮಾಹಿತಿ ಸಂಗ್ರಹಣೆಗೆ ಹೋದರೆ ಜನರು ಸಾಥ್ ನೀಡದೆ ವಿನಾಕಾರಣ ವೈದ್ಯರ ಬಳಿ ಸಿಕ್ಕಾಪಟ್ಟೆ ಪ್ರಶ್ನೆ ಕೇಳುತ್ತಿದ್ದಾರೆ. ಜೀವದ ಹಂಗು ತೊರೆದು ಕೊರೊನಾ ನಿಯಂತ್ರಿಸಲು ಶ್ರಮ ಪಡುತ್ತಿದ್ದಾಗ ಜನ ನಮಗೆ ಸಹಕಾರ ನೀಡುತ್ತಿಲ್ಲ ಎಂದು ವೈದ್ಯರು ಹಾಗೂ ಆಶಾ ಕಾರ್ಯಕರ್ತೆಯರು ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿಯ ನಿಜಾಮುದ್ದೀನ್ ಮರ್ಕಜ್ ಮಸೀದಿಯಲ್ಲಿ ನಡೆದ ತಬ್ಲಿಘಿ ಝಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರು ಸಹ ಕಡ್ಡಾಯವಾಗಿ ಆಸ್ಪತ್ರೆಗೆ ದಾಖಲಾಗಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಈ ಸಂಬಂಧ ಆರೋಗ್ಯ ಇಲಾಖೆಯ ಉಚಿತ ಆರೋಗ್ಯ ಸಹಾಯ 080-29711171ಕ್ಕೆ ಕರೆ ಮಾಡಿ ಸಂಪರ್ಕಿಸಬೇಕೆಂದು ಹೇಳಿದೆ.

ದೇಶಾದ್ಯಂತ ತಬ್ಲಿಘಿ ಜಮಾತ್‍ಗೆ ತೆರಳಿದವರು ಮತ್ತು ಅವರ ಸಂಪರ್ಕಕ್ಕೆ ಬಂದ ಒಟ್ಟು 26 ಸಾವಿರ ಮಂದಿಯನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ