Breaking News
Home / ರಾಜ್ಯ / ಕೊರೊನಾ ಸೋಂಕಿಗೆ ಆಯುರ್ವೇದ ಔಷಧ : ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು

ಕೊರೊನಾ ಸೋಂಕಿಗೆ ಆಯುರ್ವೇದ ಔಷಧ : ವೈದ್ಯನ ಮನೆ ಮುಂದೆ ಮುಗಿಬಿದ್ದ ಜನರು

Spread the love

ಹೈದರಾಬಾದ್: ಕೊರೊನಾ ಸೋಂಕಿಗೆ ವೈದ್ಯರೊಬ್ಬರು ಆಯುರ್ವೇದ ಔಷಧವೊಂದನ್ನು ಕಂಡುಹಿಡಿದಿದ್ದು, ಔಷಧಕ್ಕಾಗಿ ಜನರು ವೈದ್ಯನ ಮನೆ ಮುಂದೆ ಮುಗಿಬಿದ್ದ ಘಟನೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ನಡೆದಿದೆ.

ಆಯುರ್ವೇದ ವೈದ್ಯ ಆನಂದಯ್ಯ ಎಂಬುವವರು ಕೊರೊನಾ ಸೋಂಕಿಗೆ ಔಷಧವನ್ನು ಕಂಡು ಹಿಡಿದಿದ್ದು, ಸೋಂಕಿತರ ಚಿಕಿತ್ಸೆಗಾಗಿ ಈ ಔಷಧ ನೀಡುತ್ತಿದ್ದಾರೆ.

ಇನ್ನು ಔಷಧಿಗಾಗಿ ಜನರು ಆಗಮಿಸುತ್ತಿದ್ದು, ಸ್ಥಳದಲ್ಲಿ 10 ಸಾವಿರಕ್ಕೂ ಅಧಿಕ ಜನರು ಕಿಲೋಮೀಟರ್ ಗಟ್ಟಲೇ ಉದ್ದ ಸರತಿ ಸಾಲಿನಲ್ಲಿ ನಿಂತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಆನಂದಯ್ಯ ಆಯುರ್ವೆದಿಕ್ ಮೆಡಿಸಿನ್ ಬಗ್ಗೆ ಅಧ್ಯಯನ ನಡೆಸಲು ಈ ಔಷಧವನ್ನು ಐಸಿಎಂಆರ್ ಕಳುಹಿಸಲು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ದಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ