Breaking News

ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ?: ಉಪೇಂದ್ರ

Spread the love

ಬೆಂಗಳೂರು: ನಾನು ಮುಖ್ಯಮಂತ್ರಿ ಆಗ್ಬೇಕು, ನೀವು ನನ್ನ ಗೆಲ್ಲಿಸ್ತೀರಾ? ಎಂದು ಸ್ಯಾಂಡಲ್‍ವುಡ್ ನಟ ಉಪೇಂದ್ರ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಒಂದು ಸುದೀರ್ಘ ಪೋಸ್ಟ್​ ಹಂಚಿಕೊಳ್ಳುವ ಮೂಲವಾಗಿ ಸಖತ್ ಸುದ್ದಿಯಲ್ಲಿದ್ದಾರೆ.

ನಾನು ಉಪೇಂದ್ರ ಈ ರಾಜ್ಯದ ಮುಖ್ಯಮಂತ್ರಿ (CM ) ಆಗ್ಬೇಕು. ನಾನು ಚುನಾವಣೆಯಲ್ಲಿ ಸ್ಪರ್ಧಿಸಿದರೆ ನೀವು ನನ್ನನ್ನ ಗೆಲ್ಲಿಸ್ತೀರಾ? ಎಂಬ ಪ್ರಶ್ನೆಯೊಂದಿಗೆ ಅವರು ಮಾತು ಆರಂಭಿಸಿದ್ದಾರೆ. ಈ ಕುರಿತಾಗಿ ಅಭಿಮಾನಿಗಳು ಸಕಾರಾತ್ಮಕ ಪ್ರತಿಕ್ರೀಯೆಯನ್ನು ಕೊಟ್ಟಿದ್ದಾರೆ.

ನೀವು ನನ್ನನ್ನ ಗೆಲ್ಲಸ್ತೀರೋ.. ಸೋಲಸ್ತೀರೋ.. ಆದರೆ ನಾನು ಎಲೆಕ್ಷನ್‍ಗೆ ನಿಲ್ಲಲ್ಲ. ಹಾಗಾದ್ರೆ ಉತ್ತಮ ಪ್ರಜಾಕೀಯ ಪಕ್ಷ ಯಾಕೇ? ಅಂತ ಕೇಳ್ತೀರಾ ? ನಾನು (CM ) ಕಾಮನ್ ಮ್ಯಾನ್ ಆಗಿ ನಿಮ್ಮ ಜೊತೆಗೆ ಇರುತ್ತೇನೆ. ಪ್ರಜಾಕೀಯ ವಿಚಾರಧಾರೆಗಳನ್ನು ತೆಗೆದುಕೊಂಡು ಓಟ್ ಹಾಕಿ ಅವರಿಗೆ ಕೆಲಸ ಕೊಟ್ರೆ ನಿಮ್ ಜೊತೆ ನಿರಂತರ ಸಂಪರ್ಕದಲ್ಲಿದ್ದು, ನಿಮಗೆ ಬೇಕಾದ ಕೆಲಸ ಪೈಸ ಪೈಸ ಲೆಕ್ಕ ಕೊಟ್ಟು ಸಂಪೂರ್ಣ ಪಾರದರ್ಶಕತೆಯಿಂದ ಮಾಡುವಂತಾಗಬೇಕು.

ಭ್ರಷ್ಟ ಪ್ರತಿನಿಧಿ ರಾಜೀನಾಮೆ ಕೊಡೋತರ ಮಾಡ್ತೀನಿ. ಈ ವ್ಯವಸ್ಥೆ ಸರೀ ಹೋಗೋಕೆ ಎರಡು ಎಲೆಕ್ಷನ್ ಜಾಸ್ತಿ ಆಗ್ಲಿ. ಜನಕ್ಕೆ ಪ್ರಜಾಪ್ರಭುಗಳಿಗೆ ಅಭ್ಯರ್ಥಿ ಇಷ್ಟ ಆಗ್ದಿದ್ರೆ ಅವನು, ಅವಳು ಕೆಳಗಿಳೀಬೇಕು ಅಂತಾ ಕಾನೂನು ಬರ್ಬೇಕು. ಅದಕ್ಕೆ ನಿಮ್ ಜೊತೆ ನಾನು ಯಾವಾಗ್ಲೂ ಇರೋ ಪರ್ಮನೆಂಟ್ CM  ( ಕಾಮನ್ ಮ್ಯಾನ್) ಜನ ಅಸಾಮಾನ್ಯರಲ್ಲಿ ಒಬ್ಬನಾಗಿರ್ತೀನಿ. ಸರೀನಾ? ಎಂದು ಪ್ರಶ್ನಿಸಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್​ನಲ್ಲಿ  ಅವರು ತಮ್ಮ ಪ್ರಜಾಕೀಯದ ಆಶಯವನ್ನು ಇನ್ನಷ್ಟು ಒತ್ತಿಹೇಳುವ ಪ್ರಯತ್ನ ಮಾಡಿದ್ದಾರೆ. ಸದ್ಯ ಉಪೇಂದ್ರ ಅವರ ಈ ಪೋಸ್ಟ್ ವೈರಲ್ ಆಗಿದೆ. ಜನರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಉಪ್ಪಿ ಮಾಡುತ್ತಿರುವ ಜನಪರ ಕೆಲಸಗಳನ್ನು ಜನರು ಗಮನಿಸಿದ್ದಾರೆ. ಹಾಗಾಗಿ ತಮ್ಮ ಸಂಪೂರ್ಣ ಬೆಂಬಲ ನಿಮಗಿದೆ ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಜೊತೆಗೆ ಉಪೇಂದ್ರಗೆ ಕೆಲವು ಸಲಹೆಗಳನ್ನೂ ಜನರು ನೀಡಿದ್ದಾರೆ.

ಸರ್ ನಿಮ್ಮ ಆಲೋಚನೆಗಳು ಸರಿಯಾಗಿಯೇ ಇದೆ. ಆದರೆ ಒಂದು ಪಕ್ಷವನ್ನು ನಡೆಸಲು ಒಬ್ಬ ಸಮರ್ಥ ನಾಯಕ ಬೇಕು. ನೀವು ಆ ಜವಾಬ್ದಾರಿ ತೆಗೆದುಕೊಂಡು ಮುಖ್ಯಮಂತ್ರಿ ಆಗುವುದಾದರೆ ಯುವ ಸಮೂಹ ನಿಮ್ಮನ್ನು ಖಂಡಿತವಾಗಿ ಬೆಂಬಲಿಸುತ್ತೇವೆ. ಇಷ್ಟು ದಿನ ಕೇವಲ ಜಾತಿ, ಧರ್ಮ, ಭ್ರಷ್ಟಾಚಾರ ನೋಡಿ ನೋಡಿ ಸಾಕಾಗಿದೆ. ರಾಜ್ಯ ರಾಜಕಾರಣದ ದಿಕ್ಕು ಬದಲಾಗಬೇಕಿದೆ. ನೀವೇ ಸ್ವತಃ ರಾಜ್ಯದ ಹಳ್ಳಿ ಹಳ್ಳಿಗೂ ಪ್ರವಾಸ ಕೈಗೊಂಡು ವಿಚಾರವನ್ನು ಮುಟ್ಟಿಸಬೇಕು. ಉಪೇಂದ್ರ ಅವರೇ ನಮ್ಮ ಸಿಎಂ ಆಗಬೇಕು ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ