Breaking News

ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, : ಅಭಯ್ ಪಾಟೀಲ್

Spread the love

ಬೆಳಗಾವಿ: ಹೋಮ ಹವನ ಮಾಡುವ ಮೂಲಕ ವಾತಾವರಣ ಶುದ್ಧೀಕರಿಸುತ್ತದೆ, ಸನಾತನ ಹಿಂದೂ ಸಂಸ್ಕೃತಿ, ಇದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಹೀಗಾಗಿ ಇದೀಗ ಕೊರೊನಾ ಎಲ್ಲ ಕಡೆ ಹೆಚ್ಚಾಗಿದ್ದರಿಂದ ನಮ್ಮ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಪ್ರತಿ ಗಲ್ಲಿಯಲ್ಲಿ ಆಯಾ ಭಾಗದ ಯುವಕ ಮಂಡಳಿ, ಮಹಿಳಾ ಸಂಘಗಳು ಹಾಗೂ ಅಲ್ಲಿನ ಪ್ರಮುಖರು ತಮ್ಮ ಮನೆ, ಗಲ್ಲಿಗಳಲ್ಲಿ ಹೋಮ ಮಾಡಬೇಕಿದೆ ಎಂದು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೇಳಿದ್ದಾರೆ.

 

ಹೊಸೂರಿನಲ್ಲಿ ಸುಮಾರು 50 ಕಡೆಗಳಲ್ಲಿ ಈ ರೀತಿ ಹೋಮ ಹವನ ಮಾಡಲಾಗುತ್ತಿದೆ. ಈ ಹೋಮದಲ್ಲಿ ತುಪ್ಪ, ಅಜುವಾನ, ಅಕ್ಕಿ, ಬೇವಿನ ಸೊಪ್ಪು ಸೇರಿದಂತೆ ಇತರೆ ಪದಾರ್ಥಗಳನ್ನು ಹಾಕಿ ಹೋಮ ಮಾಡಲಾಗುತ್ತದೆ. ಬಳಿಕ ಗಾಡಿ ವ್ಯವಸ್ಥೆಯನ್ನೂ ಮಾಡಲಾಗಿದ್ದು, ಇದರ ಮೂಲಕ ಹೋಮದ ಹೊಗೆ ಸಿಂಪಡಿಸಬಹದು. ಇಂದಿನಿಂದ ಇದು ಜೂನ್ 15ರ ವರೆಗೆ ಇದೇ ರೀತಿ ಹೋಮ ನಡೆಸಲಾಗುವುದು ಎಂದರು.

ಈ ಹೋಮದಲ್ಲಿ ಬೆರಣಿ, ಕರ್ಪೂರ, ತುಪ್ಪ, ಗುಗ್ಗಳ, ಬೇವಿನ ಎಲೆ,ಅಕ್ಕಿ, ಕವಡಿ, ಧೂಪ ಹಾಗೂ ಲವಂಗವನ್ನು ಈ ಹೋಮದಲ್ಲಿ ಹಾಕುತ್ತಾರೆ. ಇದರಿಂದ ವಾತಾವರಣ ಶುದ್ಧವಾಗುತ್ತದೆ. ಅಲ್ಲದೆ ಮಾಹಾಮಾರಿ ಕೊರೊನಾ ತೊಲಗಿ ಎಲ್ಲವೂ ಸರಳವಾಗಲಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ತಮ್ಮ ವಿರುದ್ದ ದಾಖಲಾಗಿರುವ ಎಫ್​ಐಆರ್ ಕುರಿತು ಪ್ರತಿಕ್ರಿಯಿಸಿದಚಿದಾನಂದ ಸವದಿ

Spread the loveಚಿಕ್ಕೋಡಿ (ಬೆಳಗಾವಿ) : ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಷಡ್ಯಂತ್ರದ ವಿರುದ್ಧ ಅಥಣಿ ಮತಕ್ಷೇತ್ರದ ರೈತಬಾಂಧವರು ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ